Advertisement

Rakshit Shetty: ಕಾಪಿ ರೈಟ್ಸ್‌ ಉಲ್ಲಂಘನೆ ಆರೋಪ; ನ‌ಟ ರಕ್ಷಿತ್‌ ಶೆಟ್ಟಿಗೆ ಬಂಧನ ಭೀತಿ!

09:16 PM Jul 20, 2024 | Team Udayavani |

ಬೆಂಗಳೂರು: ಕಾಪಿ ರೈಟ್ಸ್‌ ಉಲ್ಲಂಘನೆ ಆರೋಪದಲ್ಲಿ ಸಿಲುಕಿರುವ ಸ್ಯಾಂಡಲ್‌ವುಡ್‌ ಖ್ಯಾತ ನಟ ಹಾಗೂ ನಿರ್ದೇಶಕ ರಕ್ಷಿತ್‌ ಶೆಟ್ಟಿ ಜಾಮೀನಿಗಾಗಿ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದೀಗ ರಕ್ಷಿತ್‌ ಶೆಟ್ಟಿ ಅವರಿಗೆ ಬಂಧನದ ಭೀತಿ ಎದುರಾಗಿದೆ.

Advertisement

ಕಾಪಿ ರೈಟ್ಸ್‌ ಉಲ್ಲಂಘನೆ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ನಿರೀಕ್ಷಣಾ ಜಾಮೀನಿಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಸಿಸಿಎಚ್‌ 61ನೇ ನ್ಯಾಯಾಲಯವು ವಿಚಾರಣೆಯನ್ನು ಜುಲೈ 24ಕ್ಕೆ ಮುಂದೂಡಿದೆ. ರಕ್ಷಿತ್‌ ಶೆಟ್ಟಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರು ಕಾಲವಕಾಶ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ.

ರಕ್ಷಿತ್‌ ಶೆಟ್ಟಿ ಒಡೆತನದ ಪರಂವಃ ಸ್ಟುಡಿಯೋಸ್‌ ನಿರ್ಮಿಸಿರುವ ರಕ್ಷಿತ್‌ ಶೆಟ್ಟಿ ನಟನೆಯ ಬ್ಯಾಚುಲರ್ಸ್‌ ಪಾರ್ಟಿ ಸಿನಿಮಾಗಾಗಿ “ನ್ಯಾಯ ಎಲ್ಲಿದೆ’ ಹಾಡಿನ ಕಾಪಿ ರೈಟ್ಸ್‌ ಉಲ್ಲಂ ಸಿ ಅನಧಿಕೃತವಾಗಿ ಬಳಸಿರುವ ಆರೋಪ ಕೇಳಿ ಬಂದಿತ್ತು. ಬ್ಯಾಚುಲರ್‌ ಪಾರ್ಟಿ ಸಿನಿಮಾದಲ್ಲಿ “ನ್ಯಾಯ ಎಲ್ಲಿದೆ’, ಒಮ್ಮೆ ನಿನ್ನನ್ನು’ ಹಾಡುಗಳನ್ನು ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಬಳಸಿದ್ದಾರೆ ಎಂದು ಆರೋಪಿಸಿ ಎಂಆರ್‌ಟಿ ಮ್ಯೂಸಿಕ್‌ ಸಂಸ್ಥೆಯ ನವೀನ್‌ ಕುಮಾರ್‌ ದೂರು ನೀಡಿದು, ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ರಕ್ಷಿತ್‌ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next