Advertisement

‘ವಿಕ್ರಾಂತ ರೋಣ’ ಕಣ್ತುಂಬಿಕೊಂಡಿರುವ ನಟ ರವಿಶಂಕರ್ ಬಿಚ್ಚಿಟ್ರು ಕುತೂಹಲಕರ ಸಂಗತಿ  

05:12 PM Jun 11, 2021 | Team Udayavani |

ಬೆಂಗಳೂರು: ಕರುನಾಡ ಬಾದ್ ಷಾ ಕಿಚ್ಚ ಸುದೀಪ್ ನಟಿಸಿರುವ ವಿಕ್ರಾಂತ ರೋಣ ಬಿಡುಗಡೆಯ ಮುನ್ನವೆ ಭಾರೀ ಹೈಪ್ ಕ್ರಿಯೇಟ್ ಮಾಡಿದೆ. ಬೆಳ್ಳಿ ಪರದೆ ಮೇಲೆ ವಿಕ್ರಾಂತನ ಆರ್ಭಟ ನೋಡಲು ಉತ್ಸುಕರಾಗಿರುವ ಕಿಚ್ಚ ಅಭಿಮಾನಿಗಳ ಕುತೂಹಲ ಇದೀಗ ಮತ್ತಷ್ಟು ಇಮ್ಮಡಿಸಿದೆ. ಅದಕ್ಕೆ ಕಾರಣ ನಟ ರವಿಶಂಕರ್ ಗೌಡ ಮಾಡಿರುವ ಒಂದು ಟ್ವೀಟ್.

Advertisement

ಹೌದು ಬಹುನಿರೀಕ್ಷಿತ ವಿಕ್ರಾಂತ ರೋಣ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸ ಶುರುವಾಗಿದ್ದು, ಡಬ್ಬಿಂಗ್ ಕೆಲಸ ಜೋರಾಗಿ ನಡೆಯುತ್ತಿದೆ. ಇದೀಗ  ಈ ಸಿನಿಮಾದಲ್ಲಿ ಅಭಿನಯಿಸಿರುವ ರವಿಶಂಕರ ಗೌಡ, ತಮ್ಮ ಪಾತ್ರಕ್ಕೆ ಡಬ್ಬಿಂಗ್ ಕೂಡ ಮುಗಿಸಿ ಬಂದಿದ್ದಾರೆ. ಜೊತಗೆ ಸಿನಿಮಾವನ್ನೂ ಕಣ್ತುಂಬಿಕೊಂಡಿದ್ದಾರೆ.

ವಿಕ್ರಾಂತ ರೋಣ ಸಿನಿಮಾ ನೋಡಿರುವ ರವಿಶಂಕರ ತಮ್ಮ ಅನುಭವವನ್ನು ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ. ‘ವಿಕ್ರಾಂತ್ ರೋಣ ಡಬ್ಬಿಂಗ್ ಮಾಡಿದೆ. ಅಬ್ಬಾ!! ಸಿನಿಮಾ ಪ್ರಾರಂಭವಾದಗಿನಿಂದ ಕೊನೆಯವರೆಗೂ ಸೀಟಿನಲ್ಲಿ ಒರಗಿಕೊಳ್ಳಲು ಸಾದ್ಯವಿಲ್ಲ. ಕುತೂಹಲದ ಮಹಾಪೂರ. ಗೆಳೆಯ ದೀಪುವಿನ ಅಭಿನಯಕ್ಕೆ ಮನಸೋಲದವರಿಲ್ಲಾ. ಹೊಸ ಕಲಾವಿದರದು ಅಚ್ಚುಕಟ್ಟಾದ ಅಭಿನಯ. ಅಭಿನಂದನೆಗಳು ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಜಾಕ್ ಮಂಜು ಸಾರ್’ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘ವಿಕ್ರಾಂತ್ ರೋಣ’ ಸಿನಿಮಾ ಆಗಸ್ಟ್​ 19ರಂದು ಭಾರತದಾದ್ಯಂತ ತೆರೆ ಕಾಣಲಿದೆ. ಬುರ್ಜಾ ಖಲೀಫಾ ಕಟ್ಟಡದ ಮೇಲೆ ‘ವಿಕ್ರಾಂತ್ ರೋಣ’ ಸಿನಿಮಾದ ಟೈಟಲ್ ಲಾಂಚ್ ಮಾಡಿದ್ದ ಚಿತ್ರತಂಡ ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ, ತಮಿಳು, ಮಲೆಯಾಳಂ ಸೇರಿದಂತೆ ಒಟ್ಟು 6 ಭಾಷೆಗಳಲ್ಲಿ ಈ ಸಿನಿಮಾವನ್ನು ತೆರೆಗೆ ತರಲಿದೆ.

‘ವಿಕ್ರಾಂತ್ ರೋಣ’ ಸಿನಿಮಾದ ಜೊತೆಗೆ ಕೋಟಿಗೊಬ್ಬ 3 ಸಿನಿಮಾ ಕೂಡ ತೆರೆಗೆ ಬರಲು ಸಿದ್ಧವಾಗಿದೆ. ಈ ಸಿನಿಮಾವನ್ನು ರಂಗಿತರಂಗ, ರಾಜರಥ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ ಸೇರಿದಂತೆ ಹಲವು ನಟರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next