Advertisement

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

11:40 AM May 21, 2024 | Team Udayavani |

ರಿಷಿ ನಾಯಕರಾಗಿ ನಟಿಸಿರುವ “ರಾಮನ ಅವತಾರ’ ಚಿತ್ರ ಇತ್ತೀಚೆಗಷ್ಟೇ ತೆರೆಕಂಡಿದೆ. ಈ ನಡುವೆಯೇ ರಿಷಿ ಸದ್ದಿಲ್ಲದೇ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ.

Advertisement

ಈ ಹಿಂದೆ “ಸಂಜು ವೆಡ್ಸ್‌ ಗೀತಾ’, “ಹಾಗೆ ಸುಮ್ಮನೆ’ ಚಿತ್ರಗಳ ನಿರ್ಮಾಪಕರಾದ ಪ್ರಮೋದ್‌ ನಾರಾಯಣ್‌ ಅವರ ನಿರ್ಮಾಣದಲ್ಲಿ ನೂತನ ಚಿತ್ರಆರಂಭವಾಗಲಿದೆ.

ರಾಕಡ್‌ ಫಿಲಂಸ್‌ ಮುಂಬೈ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಜೊಯ್‌ ದೀಪ್‌ ಬಿಸ್ವಾಸ್‌ ಹಾಗೂ ಸೋನಾಲಿ ಬಿಸ್ವಾಸ್‌ ನಿರ್ಮಾಣಕ್ಕೆ ಸಾಥ್‌ ನೀಡುತ್ತಿದ್ದಾರೆ. ವಸಂತ್‌ ಹಂಗೆ ಮತ್ತು ಕೆ.ಸಿ.ಶಿವಾನಂದ್‌ ಈ ನೂತನ ಚಿತ್ರದ ಸಹ ನಿರ್ಮಾಪಕರು.

ನಿರ್ದೇಶಕ ರಾಮ್‌ ಗೋಪಾಲ್‌ ವರ್ಮ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ, ಮೂಲತಃ ಕನ್ನಡಿಗರೆ

ಆಗಿರುವ ಕಿಶೋರ್‌ ಭಾರ್ಗವ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ತೆಲುಗು ಚಿತ್ರವೊಂದನ್ನು ನಿರ್ದೇಶಿಸಿರುವ ಕಿಶೋರ್‌ ಭಾರ್ಗವ್‌ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಆಗಸ್ಟ್‌ನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

Advertisement

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಎಲ್ಲಾ ಭಾಷೆಗಳ ಅಭಿಮಾನಿಗಳಿಗೂ ಪ್ರಿಯವಾಗುವಂತಹ ಕಥೆ ನಮ್ಮ ಚಿತ್ರದಲ್ಲಿರುತ್ತದೆ ಎನ್ನುವುದು ತಂಡದ ಮಾತು.

 

 

Advertisement

Udayavani is now on Telegram. Click here to join our channel and stay updated with the latest news.

Next