Advertisement

ಸಂಚಾರಿ ವಿಜಯ್ ಅಂಗಾಂಗ ದಾನ : ಮುಖ್ಯಮಂತ್ರಿಯಿಂದ ಕೃತಜ್ಞತೆ

01:15 PM Jun 15, 2021 | Team Udayavani |

ಬೆಂಗಳೂರು: ಅಪಘಾತದಿಂದ ನಿಧನರಾಗಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅಂಗಾಂಗ ದಾನ ಮಾಡಿದ್ದು, ಅವರ ಕುಟುಂಬದವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸಿದ್ದಾರೆ.

Advertisement

ಶನಿವಾರ ರಾತ್ರಿ ಸ್ನೇಹಿತನ ಜೊತೆ ತೆರಳುತ್ತದ್ದ ವೇಳೆ ಬೈಕ್ ಅಪಘಾತವಾಗಿತ್ತು. ಘಟನೆಯಲ್ಲಿ ವಿಜಯ್ ಅವರು ಮೆದುಳಿಗೆ ಬಲವಾದ ಪೆಟ್ಟು ಬಿದ್ದಿತ್ತು. ವೈದ್ಯರು ಎಷ್ಟೇ ಪ್ರಯತ್ನ ಪಟ್ಟರೂ ಕೂಡ ವಿಜಯ್ ಬದುಕುಳಿಯಲಿಲ್ಲ. ಸಾವಿನ ಬಳಿಕ ಅವರ ಅಂಗಾಂಗಳನ್ನು ದಾನ ಮಾಡಲಾಗಿದೆ.

ಪ್ರತಿಭಾವಂತ ನಟನ ಅಗಲಿಕೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಸಂಚಾರಿ ವಿಜಯ್ ಅವರು ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

ಇದೇ ವೇಳೆ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next