Advertisement

ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು

01:23 PM Oct 04, 2021 | Team Udayavani |

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಸತ್ಯಜಿತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಿನದಿಂದ ದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ.

ಸತ್ಯಜಿತ್ ಅವರಿಗೆ ಗ್ಯಾಂಗ್ರಿನ್ ನಿಂದಾಗಿ ಈಗಾಗಲೇ ಒಂದು ಕಾಲು ತೆಗೆಯಲಾಗಿತ್ತು. ಮಧುಮೇಹ ಹಾಗೂ ಇನ್ನಿತರ ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟ ಹಲವು ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಕನ್ನಡದ ‘ಅಪ್ಪು’, ಅರಸು, ಆಪ್ತಮಿತ್ರ, ಅಭಿ ಸೇರಿದಂತೆ ನೂರಾರು ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಅಭಿನಯಿಸಿರುವ ಸತ್ಯಜಿತ್ 2018ರಲ್ಲಿ ತೆರೆ ಕಂಡ ‘ಸೆಕೆಂಡ್ ಹಾಫ್’ ಚಿತ್ರದ ಬಳಿಕ ಅಭಿನಯದಿಂದ ದೂರ ಸರಿದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next