Advertisement

ಕೋವಿಡ್ ಸಂಕಷ್ಟ : ಸಿಎಂ ಪರಿಹಾರ ನಿಧಿಗೆ ಒಂದು ಕೋಟಿ ಹಣ ದೇಣಿಗೆ ನೀಡಿದ ನಟ ಸೂರ್ಯ

09:32 AM May 13, 2021 | Team Udayavani |

ನವದೆಹಲಿ :  ದೇಶವೇ ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿದೆ. ಉಳ್ಳವರು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ. ಇನ್ನು ಹಲವಾರು ಸಿನಿಮಾ ತಾರೆಯರು ಕೂಡ ಲಾಕ್ ಡೌನ್ ವೇಳೆ, ಕೋವಿಡ್ ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಇದೇ ಸಾಲಿನಲ್ಲಿ ಕಾಲಿವುಡ್ ಸ್ಟಾರ್ ನಟ ಸೂರ್ಯ ಮತ್ತು ಸಹೋದರರು ಕೋವಿಡ್ ಪರಿಹಾರ ನಿಧಿಗೆ ಒಂದು ಕೋಟಿ ಹಣ ನೀಡಿ ಸಹಾಯ ಮಾಡಿದ್ದಾರೆ.

Advertisement

ತಮಿಳು ಸ್ಟಾರ್ ನಟರಾದ ಕಾರ್ತಿ ಮತ್ತು ಸೂರ್ಯ ಸಹೋದರರು ಸಿ.ಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಮೇ 12 ರಂದು ಸಿ ಎಂ ಸ್ಟಾಲಿನ್ ಅವರನ್ನು ಭೇಟಿಯಾಗಿದ್ದ ಸೂರ್ಯ ಸಹೋದರರು ಚೆಕ್ ನೀಡುವ ಮೂಲಕ ಸಹಾಯ ಮಾಡಿದ್ದಾರೆ.

ಇನ್ನು ಕರ್ನಾಟಕದಲ್ಲಿಯೂ ಅನೇಕ ಸಿನಿ ಸೆಲೆಬ್ರಿಟಿಗಳು ಸಹಾಯ ಹಸ್ತ ಚಾಚುತ್ತಿದ್ದಾರೆ. ಕಿಚ್ಚ ಸುದೀಪ್, ಉಪೇಂದ್ರ ಸೇರಿದಂತೆ ಅನೇಕರು ಸಹಾಯ ಮಾಡುತ್ತಿದ್ದಾರೆ. ರಿಯಲ್ ಸ್ಟಾರ್ ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತಿದ್ದು, ರಿಯಲ್ ಸ್ಟಾರ್ ಗೆ ಅನೇಕರು ಕೈ ಜೋಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next