Advertisement

ಕುಕ್ಕೆಗೆ ಸ್ಯಾಂಡಲ್ ವುಡ್ ನಟ ಯಶ್ ಭೇಟಿ

12:01 PM Apr 10, 2022 | Team Udayavani |

ಸುಬ್ರಹ್ಮಣ್ಯ: ಕುಕ್ಕೆ ಶ್ರೀಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅವರು ರವಿವಾರ ಭೇಟಿ ನೀಡಿದರು.

Advertisement

ಶೀಘ್ರ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಕೆಜಿಎಫ್ 2 ಚಿತ್ರತಂಡದ ಜತೆಯಲ್ಲಿ ಯಶ್ ಕ್ಷೇತ್ರಕ್ಕೆ ಭೇಟಿ ನೀಡಿದರು ಎಂದು ತಿಳಿದುಬಂದಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಿತ್ರತಂಡಕ್ಕೆ ಸ್ವಾಗತಿಸಿದರು. ಯಶ್ ಹಾಗೂ ಸಂಗಡಿಗರು ಕ್ಷೇತ್ರದಲ್ಲಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯೆ ಶೋಭಾ ಗಿರಿಧರ್, ಎಇಒ ಪುಷ್ಪಲತಾ, ಶಿಷ್ಠಚಾರ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಯಶ್ ಭೇಟಿ ಸಂದರ್ಭದಲ್ಲಿ ಅಭಿಮಾನಿಗಳು ಪೋಟೊ ತೆಗೆಯಲು ಮುಗಿಬಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next