Advertisement

ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ : ರಾಮಕೃಷ್ಣನ ಸಾವಿಗೆ ನಟ ಯಶ್ ಸಂತಾಪ

08:16 PM Feb 18, 2021 | Team Udayavani |

ಬೆಂಗಳೂರು : ನನ್ನ ಅಂತ್ಯಕ್ರಿಯೆಗೆ ತಾವು ಬರಬೇಕೆಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ತಮ್ಮ ಅಭಿಮಾನಿಯ ಸಾವಿಗೆ ನಟ ಯಶ್ ಕಂಬಿನಿ ಮಿಡಿದಿದ್ದಾರೆ.

Advertisement

ಇಂದು ( ಫೆ.18) ಮಂಡ್ಯ ಜಿಲ್ಲೆಯ ಕೋಡಿದೊಡ್ಡಿ ಗ್ರಾಮದ ಯುವಕ ರಾಮಕೃಷ್ಣ ಆತ್ಮಹತ್ಯೆ ಶರಣಾಗಿದ್ದಾನೆ. ಸಾಯುವ ಮುಂಚೆ ಡೆತ್ ನೋಟ್ ಬರೆದಿಟ್ಟ ಆತ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಕೇಳಿಕೊಂಡಿದ್ದ.

ರಾಮಕೃಷ್ಣನ ಸಾವಿಗೆ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿರುವ ಯಶ್, ‘ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು, ಜೀವನ, ಹೆಮ್ಮೆ. ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆ ಪಡಲು ಸಾಧ್ಯವೇ ? ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ. ಕೋಡಿದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ ಓಂ ಶಾಂತಿ’ ಎಂದು ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ :ಸಿದ್ದರಾಮಯ್ಯ, ಯಶ್ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

ಇನ್ನು ಟ್ವಿಟರ್ ನಲ್ಲಿ ಅಭಿಮಾನಿಗಳಿಗೆ ಮತ್ತೊಮ್ಮೆ ಕಿವಿ ಮಾತು ಹೇಳಿದ್ದಾರೆ ಯಶ್. ಈ ಹಿಂದೆ 2019 ರಲ್ಲಿ ನೆಲಮಂಗಲ ತಾಲೂಕಿನ ನಿವಾಸಿ ರವಿ ಹೆಸರಿನ ಅಭಿಮಾನಿ ಯಶ್ ಮನೆ ಎದುರು ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದ. ಈ ಘಟನೆ ನಡೆದ ದಿನದಂದೇ ಯಶ್ ತನ್ನ ಅಭಿಮಾನಿಗಳಿಗೆ ಬುದ್ಧಿವಾದ ಹೇಳಿದ್ದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next