Advertisement

ಗೋವಾ ಕನ್ನಡ ಸಾಹಿತ್ಯ ಪರಿಷತ್ ನಿಂದ ನಟ ಯಶ್ ಗೆ ಸನ್ಮಾನ

05:18 PM Apr 24, 2022 | Team Udayavani |

ಪಣಜಿ: ಗೋವಾದಲ್ಲಿ ಕನ್ನಡ ಸಂಘಟನೆಗಳೊಂದಿಗೆ ಒಡಗೂಡಿ ಕಾರ್ಯಕ್ರಮ ಹಮ್ಮಿಕೊಳ್ಳೊಣ ಎಂದು ಖ್ಯಾತ ಚಲನಚಿತ್ರ ನಟ ಯಶ್ ಹೇಳಿದರು.

Advertisement

ಕೆ.ಜಿ.ಎಫ್ ಚಲನಚಿತ್ರ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ ನೇತೃತ್ವದಲ್ಲಿ ಗೋವಾದ ಖಾಸಗಿ ಹೋಟೆಲ್‍ವೊಂದರಲ್ಲಿ ಖ್ಯಾತ ನಟ ಯಶ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗೋವಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ಧಣ್ಣ ಮೇಟಿ ಮಾತನಾಡಿ- ನಟ ಯಶ್ ರವರು ಕೈಗೊಂಡಿರುವ ಸಮಾಜ ಸೇವಾ ಕಾರ್ಯ ಕೂಡ ತುಂಬಾ ದೊಡ್ಡದು. ಚಲನಚಿತ್ರ ಕ್ಷೇತ್ರದಲ್ಲಿಯೂ ಉತ್ತಮ ನಟನೆಯ ಮೂಲಕ ಹೆಸರು ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕನ್ನಡ ಸಂಘಟನೆಗಳೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಯಶ್ ರವರನ್ನು ಹೇಳಿದರು ಎಂದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ  ನಾಗರಾಜ ಗೋಂದಕರ್, ಕನ್ನಡ ಸಾಹಿತ್ಯ ಪರಿಷತ್ ಸದಸ್ಯ ಭೀಮಣ್ಣ ಹುಂಡಿ, ಅನೀಲ ಸನದಿ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next