Advertisement

ಚಿತ್ರನಟಿ ಅನು ಗೌಡ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

10:23 AM Jul 04, 2023 | Team Udayavani |

ಸಾಗರ: ತಾ‌ಲೂಕಿನ ಉಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಸ್ಪಾಡಿಯಲ್ಲಿ ಕಿರುತೆರೆ ಮತ್ತು ಚಲನಚಿತ್ರ ನಟಿ ಅನು ಗೌಡ ಅವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದ್ದು, ನಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Advertisement

ಜಮೀನಿನ ವಿವಾದದ ಕಾರಣ ಸ್ಥಳೀಯ ನಿವಾಸಿಗಳಾದ ನೀಲಮ್ಮ ಮತ್ತು ಮೋಹನ್ ಅವರು ತಮ್ಮ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಅವರು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅನೂಗೌಡ ಅವರ ತಂದೆ ತಾಯಿ ಕಾಸ್ಪಾಡಿಯಲ್ಲಿ ಜಮೀನು ನೋಡಿಕೊಳ್ಳುತ್ತಿದ್ದು, ನಟಿ ಬೆಂಗಳೂರಿನಿಂದ ಆಗಾಗ ಊರಿಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ.

ಅನು ಗೌಡ ತಮಿಳಿನಲ್ಲಿ ಮೌನಮಾನ ನೇರಂ, ಕಲಕಲ್, ಶಂಕರ, ಆಡಾದ ಆಟಮೆಲ್ಲ, ಕನ್ನಡದಲ್ಲಿ ಸವಿಸವಿ ನೆನಪು, ಭೂಗತ, ವಿಷ್ಣುವರ್ಧನ್ ಜೊತೆಗೆ ಸ್ಕೂಲ್ ಮಾಸ್ಟರ್, ಸುದೀಪ್‌ರವರೊಂದಿಗೆ ಕೆಂಪೇಗೌಡ, ರಮ್ಯಾಗೆ ಅಕ್ಕನಾಗಿ ದಂಡಂ ದಶಗುಣಂ, ಶಿವರಾಜ್‌ಕುಮಾರ್‌ರ ಸುಗ್ರೀವ, ಪುನೀತ್ ಅವರ ಹುಡುಗರು ಮತ್ತು ಇನ್ನೂ ಬಿಡುಗಡೆಯಾಗಬೇಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಸಿನೆಮಾ ದಲ್ಲಿ ದರ್ಶನ್ ಮನೆಯ ಸೊಸೆಯಾಗಿ ನಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next