Advertisement
ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಥೋಲ್ ತಿರುಮಾವಾಲವನ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಖುಷ್ಬೂ ಚಿದಂಬರಂಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಚೆನ್ನೈ ಹೊರವಲಯದಲ್ಲಿರುವ ಮುತ್ತಕಾಡು ಎಂಬಲ್ಲಿ ಅವರನ್ನು ತಡೆದ ಪೊಲೀಸರು ಬಂಧಿಸಿದ್ದಾರೆ.
Related Articles
Advertisement
ಮತ್ತೊಂದು ಟ್ವೀಟ್ ಮಾಡಿರುವ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲವೇ? ನನ್ನ ಪ್ರಯಣಕ್ಕೆ ಅವಕಾಶ ನೀಡದೆ ಹಕ್ಕು ಕಸಿದುಕೊಳ್ಳಲಾಗಿದೆ. ಈ ಘಟನೆಯ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ನಾಯಕರು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಚಿದಂಬರಂ ಸಂಸದ ಥೋಲ್ ತಿರುಮಾವಾಲವನ್ ಅವರು, ಮನುಸ್ಮೃತಿ ಹಾಗೂ ಮಹಿಳೆಯರ ಕುರಿತು ಅದರ ದೃಷ್ಟಿಕೋನದ ಬಗ್ಗೆ ವ್ಯಂಗ್ಯವಾಡಿದ್ದರು. ಸೆಪ್ಟೆಂಬರ್ನಲ್ಲಿ ನಡೆದ ವೆಬಿನಾರ್ನಲ್ಲಿ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದರು ಎಂದು ಆರೋಪಿಸಲಾಗಿದೆ.