Advertisement

ಬಿಜೆಪಿ ನಾಯಕಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರು ಅಪಘಾತ! ಅಪಾಯದಿಂದ ಪಾರು

11:32 AM Nov 18, 2020 | sudhir |

ಚೆನ್ನೈ: ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿದ್ದು ಅದೃಷ್ಟವಶಾತ್ ಖುಷ್ಬೂ ಸೇರಿ ಕಾರಿನಲ್ಲಿದ್ದವರು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಖುಷ್ಬೂ ಅವರು ಕಡಲೂರಿಗೆ ತೆರಳುತ್ತಿದ್ದ ವೇಳೆ ಮೇಲ್ ಮರವತ್ತೂರ್ ಬಳಿ ಟ್ಯಾಂಕರೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನ ಎಡಭಾಗ ನುಜ್ಜುಗುಜ್ಜಾಗಿದೆ, ಕಾರಿನಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಕುರಿತು ಬಿಜೆಪಿ ನಾಯಕಿ ಖುಷ್ಬೂ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ನಿಮ್ಮೆಲ್ಲರ ಅಶೀರ್ವಾದ ಹಾಗೂ ದೇವರ ಕೃಪೆಯಿಂದ ನಾನು ಸುರಕ್ಷಿತವಾಗಿದ್ದೇನೆ. ಕಡೂರು ಕಡೆಗೆ ನನ್ನ ಪ್ರಯಾಣ ಮುಂದುವರಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next