Advertisement

ಗ್ರಾಮೀಣ ಜನರಿಗಾಗಿ ಜಮೀನು ಮಾರಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ನಟಿ ಲೀಲಾವತಿ

12:43 PM Mar 21, 2022 | Team Udayavani |

ನೆಲಮಂಗಲ: ಗಡಿ ಭಾಗದ ಹಳ್ಳಿಗಳಿಗೆ ಮೂಲ ಸೌಕರ್ಯದ ಕೊರತೆ ಎಂದು ಮೂಗು ಮುರಿಯುವ ಕಾಲದಲ್ಲಿ ತಮ್ಮ ಸ್ವಂತ ಜಮೀನು ಮಾರಿ, ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ.ಎಂ.ಲೀಲಾವತಿ ಮುಂದಾಗಿದ್ದಾರೆ.

Advertisement

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ಸುಮಾರು 10 ವರ್ಷಗಳ ಹಿಂದೆ ಸಣ್ಣದೊಂದು ಆಸ್ಪತ್ರೆ ನಿರ್ಮಾಣ ಮಾಡಿದ್ದ ಡಾ.ಎಂ.ಲೀಲಾವತಿಯವರು, ಇಂದು ಮತ್ತೊಂದು ಪ್ರಾಥಮಿಕ ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.

ತಾಯಿ ಲೀಲಾವತಿ ಅಮ್ಮನವರ ಆಸೆಯಂತೆ ಚೈನೈ ನಲ್ಲಿರುವ ತಮ್ಮ ಸ್ವಂತ ಜಮೀನನ್ನು ಮಾರಿದ ನಟ ವಿನೋದ್ ರಾಜ್ ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಡಾ.ಲೀಲಾವತಿಯವರ ಆರೋಗ್ಯ ಕ್ಷೀಣವಾಗಿದ್ದು ಅವರ ಅನುಪಸ್ಥಿತಿಯಲ್ಲಿ, ಮಗ ನಟ ವಿನೋದ್ ರಾಜ್ ಚಾಲನೆ ನೀಡಿದರು.

ಇನ್ನೂ ಭೂಮಿ ಪೂಜೆಗೆ ನೆಲಮಂಗಲ ಶಾಸಕ ಡಾ.ಕೆ.ಶ್ರೀನಿವಾಸ ಮೂರ್ತಿ ಕೂಡ ಭಾಗಿಯಾಗಿ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ಹಾಗೂ ಅವರ ಹೆಸರಿನ ಆಸ್ಪತ್ರೆಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನ ಒದಗಿಸುವ ಭರವಸೆ ನೀಡಿದರು. ಈ ವೇಳೆ ಟಿಎಚ್ಓ ಡಾ. ಹರೀಶ್, ಡಾ.ಮಂಜುಳ, ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪ ಕೃಷ್ಣಪ್ಪ, ಸದಸ್ಯ ಶ್ರೀನಿವಾಸ್, ರಾಮಕೃಷ್ಣಪ್ಪ, ಸಂತೋಷ ನಾಯಕ, ಗೋಪಾಲ್, ವೆಂಕಟೇಶ್ ಗ್ರಾಮದ ಜನರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next