Advertisement

ಮೇಕಪ್ ಕಲಾವಿದರಿಗೆ ನೆರವಿನ ಹಸ್ತ ಚಾಚಿದ ನಟಿ ಪ್ರಣೀತಾ   

03:03 PM Jun 05, 2021 | Team Udayavani |

ಬೆಂಗಳೂರು : ಕೊರೊನಾ ಮಹಾಮಾರಿ ಸಾಕಷ್ಟು ಜನರಿಗೆ ತೊಂದರೆ ಕೊಟ್ಟಿದೆ. ಸಿನಿಮಾ ಕಲಾವಿದರು, ತಂತ್ರಜ್ಞರು, ಮೇಕಪ್ ಕಲಾವಿದರು ಲಾಕ್ ಡೌನ್ ನಿಂದಾಗಿ ತೊಂದರೆ ಅನುಭವಿಸುವಂತಾಗಿದೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಸ್ಯಾಂಡಲ್ವುಡ್ ನಟಿ ಪ್ರಣೀತಾ ಅವರು ನೆರವಿನ ಹಸ್ತ ಚಾಚಿದ್ದಾರೆ.

Advertisement

ಇತ್ತೀಚಿಗಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಪ್ರಣೀತಾ, ತಮ್ಮ ಸಾಮಾಜಿಕ ಕಾರ್ಯ ಮುಂದುವರೆಸಿದ್ದಾರೆ. ಕನ್ನಡ ಚಿತ್ರರಂಗದ ಮೇಕಪ್ ಕಲಾವಿದರು ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ತೊಂದರೆ ಅನುಭವಿಸುವಂತಾಗಿದ್ದು, ಇದೀಗ ಸುಮಾರು 100 ಜನ ಕನ್ನಡ ಮೇಕಪ್ ಕಲಾವಿದರಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣಿ ಸೇರಿದಂತೆ ದಿನಸಿ ಕಿಟ್ ಒದಗಿಸಿ ಸಹಾಯ ಹಸ್ತ ಚಾಚಿದ್ದಾರೆ.

ನಟಿ ಪ್ರಣೀತಾ ಅವರ ಕಾರ್ಯಕ್ಕೆ ಮೇಕಪ್ ಕಲಾವಿದರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನು ಕೇವಲ ಪ್ರಣೀತಾ ಮಾತ್ರವಲ್ಲದೆ ಹರ್ಷಿಕಾ ಪೂಣಚ್ಚ, ರಾಕಿಂಗ್ ಸ್ಟಾರ್ ಯಶ್, ರಿಯಲ್ ಸ್ಟಾರ್ ಉಪೇಂದ್ರ ಅವರು ಕನ್ನಡ ಚಿತ್ರರಂಗದ ಸಾವಿರಾರು ಕುಟುಂಬಗಳಿಗೆ ಸಹಾಯ ಮಾಡುತ್ತಿದ್ದಾರೆ.

ಯಶ್ ಅವರು ಸುಮಾರು 3000 ಕುಟುಂಬಗಳಿಗೆ ತಲಾ 5000 ರೂಪಾಯಿ ಧನಸಹಾಯ ಮಾಡಿದ್ದಾರೆ. ಉಪೇಂದ್ರ ಅವರು ರೈತರಿಂದ ನೇರವಾಗಿ ತರಕಾರಿ ಖರೀದಿಸಿ ಎಲ್ಲರಿಗೂ ಹಂಚುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next