Advertisement

ಲವ್ ಯೂ ರಚ್ಚು ಚಿತ್ರದ ನಟಿ ರಚಿತಾ ರಾಮ್ ಬಿಡದಿ ಪೊಲೀಸ್ ಠಾಣೆಗೆ ಭೇಟಿ

07:49 PM Aug 24, 2021 | Team Udayavani |

ರಾಮನಗರ: ಲವ್ ಯೂ ರಚ್ಚು ಚಿತ್ರದ ಚಿತ್ರೀಕರಣದ ವೇಳೆ ಸಾಹಸ ಕಲಾವಿದರೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಗೆ ನಟಿ ರಚಿತಾ ರಾಮ್ ಭೇಟಿ ನೀಡಿದ್ದರು.

Advertisement

ಕಳೆದ ಆ.9ರಂದು ಬಿಡದಿ ಹೋಬಳಿ ಜೋಗನಪಾಳ್ಯದಲ್ಲಿ ಖಾಸಗಿ ತೆಂಗಿನ ತೋಟದಲ್ಲಿ ಚಿತ್ರೀಕರಣದ ವೇಳೆ ಸಂಭವಿಸಿದ್ದ ವಿದ್ಯುತ್ ಅವಘಡದಲ್ಲಿ ಸಾಹಸ ಕಲಾವಿದ ವಿವೇಕ್ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ, ಸಾಹಸ ನಿರ್ದೇಶಕ ಮತ್ತು ಕ್ರೇನ್ ಆಪರೇಟರ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಇದೇ ವಿಷಯಕ್ಕೆ ಸಂಬಂದಿಸಿದಂತೆ ಚಿತ್ರನಟಿ ರಚಿತ ರಾಂ ಮಂಗಳವಾರ ಸಂಜೆ ಬಿಡದಿ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆಗೆ ಸಹಕರಿಸಿದರು. ರಾಮನಗರ ಡಿವೈಎಸ್ಪಿ ಮೋಹನ್ ವಿಚಾರಣೆ ನಡೆಸಿ ಚಿತ್ರೀಕರಣ ಸಂದಭರ್ದಲ್ಲಾದ ದುರಂತದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
ಲವ್ ಯೂ ರಚ್ಚು ಚಲನ ಚಿತ್ರದ ಅವಘಡಕ್ಕೆ ಸಂಬಂದಿಸಿದಂತೆ ಚಿತ್ರ ನಿರ್ದೇಶಕ ಶಂಕರ್, ಕ್ರೇನ್ ಆಪರೇಟರ್ ಮಹದೇವ್ ಮತ್ತು ಸಾಹಸ ನಿರ್ದೇಶಕ ವಿನೋದ್ ಕುಮಾರ್ ವಿರುದ್ದ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇಲ್ಲಿನ ಅಪರ ಹಿರಿಯ ಸಿವಿಲ್ ನ್ಯಾಯಾಲಯ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂ‘ನದ ಆದೇಶ ನೀಡಿತ್ತು. ಇಂದು ಪ್ರಕರಣ ನ್ಯಾಯಾಲಯದ ಮುಂದೆ ಬಂದಿತ್ತು. ನ್ಯಾಯಾಧೀಶರಾದ ಅನುಪಮ ಲಕ್ಷ್ಮಿ ಅವರು ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿದ್ದಾರೆ. ಆರೋಪಿಗಳ ನ್ಯಾಯಾಂಗ ಬಂಧನವೂ ವಿಸ್ತರಣೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next