Advertisement

ಐತಿಹಾಸಿಕ ಪ್ರವಾಸಿ ತಾಣಗಳಿಗೆ ನಟಿ ಶೃತಿ ಭೇಟಿ-ಪರಿಶೀಲನೆ

12:05 PM Oct 04, 2020 | sudhir |

ಬಾದಾಮಿ: ಐತಿಹಾಸಿಕ ಪ್ರವಾಸಿ ತಾಣಗಳಾದ ಬಾದಾಮಿ, ಐಹೊಳೆ, ಪಟ್ಟದಕಲ್ಲ ಹಾಗೂ ಮಹಾಕೂಟ ಪ್ರದೇಶಗಳಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ, ಚಲನಚಿತ್ರ ನಟಿ ಶೃತಿ ಶನಿವಾರ ಭೇಟಿ ನೀಡಿ
ಪರಿಶೀಲನೆ ನಡೆಸಿದರು.

Advertisement

ಬಾದಾಮಿಯ ಗುಹಾಂತರ ದೇವಾಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅಧ್ಯಕ್ಷರು ಸ್ಥಳಾಂತರಗೊಳ್ಳಬೇಕಾದ ಮನೆ ಹಾಗೂ ಅದಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ ಅನಿಲಕುಮಾರ ಅವರಿಂದ ಮಾಹಿತಿ ಪಡೆದರು. ಪಟ್ಟದಕಲ್ಲ ಮತ್ತು ಐಹೊಳೆ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿಯ ಮನೆಗಳ ಸ್ಥಳಾಂತರ ಬಗ್ಗೆ ಮಾಹಿತಿ ಪಡೆದುಕೊಂಡರು.

ಶೃತಿ ಭೇಟಿ ಮಾಡಿ ಪ್ರವಾಸೋದ್ಯಮ ಬಗ್ಗೆ ಚರ್ಚಿಸಿದ ಮಹಾಂತೇಶ ಹಟ್ಟಿ: ಕನ್ನಡ ಅಭಿವೃದ್ಧಿ ಪ್ರಾ ಧಿಕಾರದ ಮಾಜಿ ರಾಜ್ಯ ಸದಸ್ಯ ಮಹಾಂತೇಶ ಹಟ್ಟಿ ಮತ್ತು ಯುವಮುಖಂಡ ಮುತ್ತಣ್ಣ ಯರಗೊಪ್ಪ ಅವರು ಪ್ರವಾಸೋದ್ಯಮ ಅಭಿವೃದ್ಧಿ
ನಿಗಮದ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next