Advertisement

Kalasa: ಹಾಡಿನ ಚಿತ್ರೀಕರಣದ ವೇಳೆ ನಟಿ ಶುಭಾ ಪೂಂಜಾ ಜೊತೆ ಕಿಡಿಗೇಡಿಗಳ ಅಸಭ್ಯ ವರ್ತನೆ

01:42 PM Oct 28, 2023 | Team Udayavani |

ಚಿಕ್ಕಮಗಳೂರು: ಚಿತ್ರದ ಹಾಡಿನ ಚಿತ್ರೀಕರಣದ ವೇಳೆ ನಟಿ ಶುಭಾ ಪೂಂಜಾ ಅವರೊಂದಿಗೆ ಕಿಡಿಗೇಡಿಗಳ ಗುಂಪೊಂದು ಅಸಭ್ಯ ವರ್ತನೆ ತೋರಿಸಿದ ಘಟನೆ ಕುದುರೆಮುಖದ ಮೈದಾಡಿ ಗುಡ್ಡದಲ್ಲಿ ಶನಿವಾರ ನಡೆದಿದೆ.

Advertisement

ಸುಧೀರ್ ಅತ್ತಾವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕೊರಗಜ್ಜ ಚಿತ್ರದ ಹಾಡಿನ ಚಿತ್ರೀಕರಣ ಚಿಕ್ಕಮಗಳೂರಿನ ಮೈದಾಡಿ ಗುಡ್ಡದಲ್ಲಿ ನಡೆಯುತ್ತಿತ್ತು, ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಜೊತೆ ಶುಭಾ ಪೂಂಜಾ ಶೂಟಿಂಗ್ ನಡೆಸುವ ವೇಳೆ ಯುವಕರ ಗುಂಪು ಶುಭಾ ಪೂಂಜಾ ಅವರ ಕೈ ಹಿಡಿದು ಎಳೆದಾಡಿದ್ದಾರೆ.

ಯುವಕರ ಅಸಭ್ಯ ವರ್ತನೆಯಿಂದ ಹಾಡಿನ ಚಿತ್ರೀಕರಣವನ್ನು ಚಿತ್ರತಂಡ ಅರ್ಧಕ್ಕೆ ನಿಲ್ಲಿಸಿದೆ.

ಘಟನೆ ಕುರಿತು ಹೇಳಿಕೆ ನೀಡಿದ ನಿರ್ದೇಶಕ ಸುಧೀರ್ ಅತ್ತಾವರ, ಮೈದಾಡಿ ಗುಡ್ಡದಲ್ಲಿ ಚಿತ್ರೀಕರಣ ನಡೆಯುವ ವೇಳೆ ಯುವಕರು ನಡೆದ ರೀತಿ ಮನಸ್ಸಿಗೆ ಅತ್ಯಂತ ನೋವು ಉಂಟು ಮಾಡಿದೆ. ಯಾವುದೋ ಉದ್ದೇಶದಿಂದ ಯುವಕರು ಅಸಭ್ಯ ವರ್ತನೆ ಮಾಡಿದ್ರು, ಇದರಿಂದ ಚಿತ್ರಿಕರಣವನ್ನೇ ನಿಲ್ಲಿಸಬೇಕಾದಂತ ಪರಿಸ್ಥಿತಿ ನಿರ್ಮಾಣವಾಯಿತು. ಹಾಡಿನ ಚಿತ್ರೀಕರಣಕ್ಕಾಗಿ 50 ಜನ ಕಲಾವಿದರು, ಖ್ಯಾತ ಕೊರಿಯೋಗ್ರಾಫರ್ ಗಣೇಶ ಆಚಾರ್ಯ ಕೂಡ ಇದ್ದರು ಎಂದು ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಾಗಿದ್ದು, ಸದ್ಯ ಘಟನೆ ಕುರಿತು ಯಾವುದೇ ದೂರು ದಾಖಲಿಸಿಲ್ಲ ಎಂದು ಅವರು ಹೇಳಿದ್ದಾರೆ.

Advertisement

ಇದನ್ನೂ ಓದಿ: IFFI: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡದ ಕಾಂತಾರ.. ಇಲ್ಲಿದೆ ಸಿನಿಮಾಗಳ ಪಟ್ಟಿ

Advertisement

Udayavani is now on Telegram. Click here to join our channel and stay updated with the latest news.

Next