Advertisement

“ನನಗೆ ದುಡ್ಡು ಬೇಡ, ಕರ್ನಾಟಕ ಬಿಟ್ಟು ಹೋಗುತ್ತೇನೆ” : ನಟಿ ವಿಜಯಲಕ್ಷ್ಮಿ

02:14 PM Oct 03, 2021 | Team Udayavani |

ಬೆಂಗಳೂರು: ಸಂಕಷ್ಟದಲ್ಲಿದ್ದೇನೆ ಎಂದು ಹೇಳುತ್ತಿರುವ ನಟಿ ವಿಜಯಲಕ್ಷ್ಮಿ ಇದೀನ ನಾನೀಗ ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ ಎಂದಿದ್ದಾರೆ.

Advertisement

ಕಳೆದ ಕೆಲವು ತಿಂಗಳುಗಳಿಂದ ಭಾರೀ ಚರ್ಚೆಯಲ್ಲಿರುವ ವಿಜಯಲಕ್ಷ್ಮೀ , ‘ಏಪ್ರಿಲ್​ನಿಂದ ಇಲ್ಲಿಯವರೆಗೆ ಕಷ್ಟಪಡುತ್ತಿದ್ದೇನೆ. ನನಗೆ ಬಹಳ ನೋವಾಗಿದೆ. ಕರ್ನಾಟಕ ಬಿಟ್ಟು ಹೋಗುತ್ತೇನೆ. ಯಾರ ಕಣ್ಣಿಗೂ ಸಿಗುವುದಿಲ್ಲ ಎಂದಿದ್ದಾರೆ.

ತಾಯಿ ಅಗಲಿಕೆಯಿಂದ ನೊಂದಿರುವ ವಿಜಯಲಕ್ಷ್ಮಿ ತಮ್ಮ ಸುತ್ತ ನಡೆಯುತ್ತಿರುವ ಕೆಲವೊಂದು ಘಟನೆಗಳ ಕುರಿತು ಬೇಸರಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,   ‘ನನಗಾಗಿ ಯೋಗೇಶ್​ ಎಂಬುವವರ ಖಾತೆಗೆ ಜನರು ಹಾಕಿರುವ 3 ಲಕ್ಷ ರೂ. ಹಣ ನನಗೆ ಬೇಡ. ಅಕ್ಕನನ್ನು ಕರೆದುಕೊಂದು ದೂರ ಹೋಗುತ್ತೇನೆ’ ಎಂದಿದ್ದಾರೆ.

‘ಜನರ ಎದುರಿನಲ್ಲಿ ನನ್ನನ್ನು ಕೆಟ್ಟವಳಂತೆ ಬಿಂಬಿಸುವ ಸಂಚು ನಡೆದಿದೆ. ಮೊನ್ನೆ ವಾಣಿಜ್ಯ ಮಂಡಳಿಗೆ ನನ್ನನ್ನು ಕರೆದಿದ್ದು. ಯೋಗೇಶ್​ ಅಕೌಂಟ್​ನಲ್ಲಿ ಇರುವ ಹಣವನ್ನು ಕೊಡುತ್ತೇವೆ ಅಂತ ಹೇಳಿದ್ದರು. ಇವತ್ತಿನವರೆಗೂ ನನಗೆ ಆ ಹಣ ಸಿಕ್ಕಿಲ್ಲ. ನಿನ್ನೆ ಯಾರೋ ಲಯನ್​ ಜಯರಾಜ್​ ಎಂಬುವವರು ವಿಡಿಯೋದಲ್ಲಿ ನನಗೆ ಬೈಯ್ಯುತ್ತಿದ್ದರು. ಇನ್ನೊಂದು ವಿಡಿಯೋದಲ್ಲಿ ಯಾರೋ ನನ್ನ ಬಗ್ಗೆ ಅಸಹ್ಯವಾಗಿ ಮಾತನಾಡುತ್ತಿದ್ದರು’ ಎಂದು ವಿಜಯಲಕ್ಷ್ಮೀ ಬೇಸರ ತೋಡಿಕೊಂಡಿದ್ದಾರೆ.

‘ಕೃತಜ್ಞತೆ ಇಲ್ಲದವಳ ರೀತಿಯಲ್ಲಿ ನನ್ನನ್ನು ಬಿಂಬಿಸುತ್ತಿದ್ದಾರೆ. ಈ ವಿಡಿಯೋ ಮೂಲಕ ನಾನು ಆಣೆ ಮಾಡಿ ಹೇಳುತ್ತೇನೆ. ಯೋಗೇಶ್​ ಖಾತೆಯಲ್ಲಿನ ಹಣ ನನ್ನ ಕೈಸೇರಿಲ್ಲ. ಅದನ್ನು ನಾನು ತೆಗೆದುಕೊಳ್ಳುವುದೂ ಇಲ್ಲ. ನನಗೆ ನೆಮ್ಮದಿ ಬೇಕು. ಅಕ್ಕನನ್ನು ಕರೆದುಕೊಂಡು ನಾನು ಎಲ್ಲಾದರೂ ಹೊರಟು ಹೋಗುತ್ತೇನೆ’  ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next