Advertisement

‘ನಾನು ಚಪ್ಪಲಿಯಲ್ಲಿ ಹೊಡೆದೆ ಎಂದು ರಾಯರ ಮೇಲೆ ಆಣೆ ಮಾಡಿ ಹೇಳಲಿ’

12:55 PM Jul 08, 2021 | Team Udayavani |

ಬೆಂಗಳೂರು : ತಮ್ಮ ಹಾಗೂ ಜಗ್ಗೇಶ್ ಅವರ ನಡುವೆ ನಡೆದಿದ್ದ ಹಳೆಯ ಕಾಂಟ್ರವರ್ಸಿಯೊಂದನ್ನು ಕನ್ನಡ ಚಿತ್ರರಂಗದಿಂದ ದೂರಾಗಿರುವ ನಟಿ ವಿಜಯಲಕ್ಷ್ಮೀ ಅವರು ಕೆದಕಿದ್ದಾರೆ.

Advertisement

ವಿಡಿಯೋವೊಂದನ್ನು ಹರಿಬಿಟ್ಟಿರುವ ನಟಿ ವಿಜಯಲಕ್ಷ್ಮೀ, ಅದರಲ್ಲಿ ”ನನ್ನ ಜೀವನದಲ್ಲಿ ಮೊದಲು ದೊಡ್ಡ ವಿವಾದ ಮಾಡಿದ್ದು ನಟ ಜಗ್ಗೇಶ್. ನಾನು ಚಪ್ಪಲಿಯಲ್ಲಿ ಹೊಡೆದೆ ಎಂದು ದೊಡ್ಡ ವಿವಾದ ಮಾಡಿದರು. ನಾಲ್ಕು ತಿಂಗಳು ಹಲವು ಯೂನಿಯನ್‌ಗಳಿಗೆ ನನ್ನನ್ನು ಕರೆಯಿಸಿ ಕ್ಷಮಾಪಣೆ ಕೇಳುವಂತೆ ಮಾಡಿದರು. ಯಾಕೆ ಅಂತಲೇ ನನಗೆ ಅರ್ಥ ಆಗಲಿಲ್ಲ.

ಆ ವಿವಾದ ಆದಾಗ ನನ್ನನ್ನು ಕಾಪಾಡಿದ್ದು ಪಾರ್ವತಮ್ಮ ರಾಜ್‌ಕುಮಾರ್. ಅವರೇ ನನ್ನನ್ನು ಆ ವಿವಾದದಿಂದ ಮುಕ್ತಿ ಕೊಡಿಸಿದರು. ಈಗ ಪಾರ್ವತಮ್ಮ ಅವರ ಜಾಗದಲ್ಲಿ ಶಿವಣ್ಣ ಇದ್ದಾರೆ

ಜಗ್ಗೇಶ್ ಅವರು ಪ್ರತಿ ಟ್ವೀಟ್‌ಗೆ ರಾಯರನ್ನು ನೆನಪಿಸಿಕೊಳ್ಳುತ್ತಾರೆ. ನಾನು ಚಪ್ಪಲಿಯಲ್ಲಿ ಹೊಡೆದೆ ಎಂದು ಈಗಲೂ ಅವರು ರಾಯರ ಮೇಲೆ ಆಣೆ ಮಾಡಿ ಹೇಳಲಿ. ಅವರು ಹೇಳುವುದಿಲ್ಲ. ಯಾಕಂದರೆ ಅದು ಸುಳ್ಳು. ಆ ಸಮಯದಲ್ಲಿ ನನ್ನ ವೃತ್ತಿ ಜೀವನ ಹಾಳು ಮಾಡಲು ಅವರು ಹಾಗೆ ಮಾಡಿದ್ದರು ಎಂದು ನಟಿ ವಿಜಯಲಕ್ಷ್ಮೀ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next