Advertisement
ನಗರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಆಯುಕ್ತಾಲಯವು ಡಯಟ್ ಆವರಣದಲ್ಲಿ ಆಯೋಜಿಸಿದ್ದ ಬೆಳಗಾವಿ ವಿಭಾಗಮಟ್ಟದ ಶಿಕ್ಷಣ ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಶಿಕ್ಷಣ ಇಲಾಖೆಯಿಂದ ಸಮಾಜದಲ್ಲಿ ಶಕ್ತಿ ತುಂಬುವ, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವಕೆಲಸವಾಗಬೇಕು. ಮಕ್ಕಳು ಪರೀಕ್ಷೆಗಳನ್ನುಯಾವುದೇ ಭಯ, ಆತಂಕಗಳಿಲ್ಲದೆ ಖುಷಿಯಿಂದ ಆತ್ಮವಿಶ್ವಾಸದಿಂದ ಎದುರಿಸುವ ವಾತಾವರಣಬೆಳಸಬೇಕು. ಸಮಾಜದಲ್ಲಿ ಗೌರವ ಭಾವನೆಹೆಚ್ಚಿಸುವಂತಹ ಕಾರ್ಯ ಪ್ರತಿಯೊಬ್ಬರಿಂದ ಆಗಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಮಾತನಾಡಿ, ಶಿಕ್ಷಣ ಇಲಾಖೆ ಕಚೇರಿಗಳಲ್ಲಿಕೆಲಸಗಳು ವಿನಾಕಾರಣ ವಿಳಂಬವಾಗುತ್ತಿದೆ. ಆಭಾಗದ ಶಾಸಕರನ್ನು ಭೇಟಿಯಾಗದಿದ್ದರೆ ಕೆಲಸವೇಆಗಲ್ಲ ಎಂಬ ಸ್ಥಿತಿ ಇದೆ. ಇದು ಬೋಧನೆ ಮೇಲೆಪರಿಣಾಮ ಬೀರುತ್ತಿದೆ. ನಿಂತೇ ಹೋಗಿದ್ದ ಶಿಕ್ಷಣಅದಾಲತ್ ಮರಳಿ ಆರಂಭಿಸುವ ಒತ್ತಾಯವಿತ್ತು.ಕನಿಷ್ಠ ಎರಡು ವರ್ಷಗಳಿಗೆ ಒಮ್ಮೆಯಾದರೂ ಇಂತಹ ಅದಾಲತ್ ನಡೆಯಬೇಕು ಎಂದರು.
ವಿಧಾನ ಪರಿಷತ ಸದಸ್ಯ ಹನಮಂತ ನಿರಾಣಿ ಮಾತನಾಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಆರ್. ಸ್ನೇಹಲ್, ಸ್ಲಿಪ್ ಸಂಸ್ಥೆಯನಿರ್ದೇಶಕ ರಘುವೀರ, ಡಿಡಿಪಿಐಗಳಾದ ಎಂ.ಎಲ್.ಹಂಚಾಟೆ, ಆರ್.ಎಸ್. ಮುಳ್ಳೂರ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು. ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಸ್ವಾಗತಿಸಿದರು. ವಿದ್ಯಾ ನಾಡಿಗೇರ ನಿರೂಪಿಸಿದರು. ನಿರ್ದೇಶಕಿ ಮಮತಾ ನಾಯಕ ವಂದಿಸಿದರು.