Advertisement

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ದ್ರೌಪದಿ ಮುರ್ಮು

09:01 PM Jul 10, 2022 | Team Udayavani |

ಬೆಂಗಳೂರು : ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾನುವಾರ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರನ್ನು ಭೇಟಿ ಮಾಡಿ ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಜೆಡಿಎಸ್ ಪಕ್ಷದ ಬೆಂಬಲ ಕೋರಿದ್ದಾರೆ.

Advertisement

ಗೌಡರನ್ನು ಭೇಟಿಯಾದ ಸಂದರ್ಭದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರ ಜತೆಗಿದ್ದರು. ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್. ಡಿ, ರೇವಣ್ಣ ಕೂಡ ಉಪಸ್ಥಿತರಿದ್ದು, ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದರು.

ಇದಕ್ಕೂ ಮುನ್ನ ಖಾಸಗಿ ಜೆಟ್‌ನಲ್ಲಿ ಆಗಮಿಸಿದ ಮುರ್ಮು ಅವರನ್ನು ಸಿಎಂ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಪಕ್ಷದ ಇತರ ಕಾರ್ಯಕರ್ತರು ಮಾಲಾರ್ಪಣೆ ಮಾಡಿ ,ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು. ನಂತರ, ಮುರ್ಮು ಅವರು ಹೋಟೆಲ್‌ಗೆ ತೆರಳಿ ಅಲ್ಲಿ ಬಿಜೆಪಿ ಶಾಸಕರು ಮತ್ತು ಸಂಸದರನ್ನು ಉದ್ದೇಶಿಸಿ ಮಾತನಾಡಿ ಚುನಾವಣೆಯಲ್ಲಿ ಬೆಂಬಲ ಕೋರಿದರು.

ಈ ಹಿಂದೆ ದೇವೇಗೌಡರೊಂದಿಗೆ ಮಾತನಾಡಿ ರಾಷ್ಟ್ರಪತಿ ಚುನಾವಣೆಯಲ್ಲಿ ಅವರ ಶುಭಾಶಯಗಳನ್ನು ಕೋರಿದ್ದರು ಮತ್ತು ಕುಮಾರಸ್ವಾಮಿ ಅವರ ಬಳಿ ಪಕ್ಷದ ಬೆಂಬಲವನ್ನು ಕೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next