Advertisement

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಪರಿಶೀಲನೆ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್

12:43 PM Jul 25, 2023 | Team Udayavani |

ರಾಮನಗರ: ಎಡಿಜಿಪಿ ಅಲೋಕ್ ಕುಮಾರ್ ಅವರು ಇಂದು ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯ ಪರಿಶೀಲನೆ ನಡೆಸಿದರು.

Advertisement

ಒಂದು ತಿಂಗಳ ಹಿಂದೆ ಹೆದ್ದಾರಿ ಪರಿಶೀಲನೆ ಮಾಡಿದ್ದ ಎಡಿಜಿಪಿ ಅಲೋಕ್ ಕುಮಾರ್ ಅವರು ಇದೀಗ ಎರಡನೇ ಬಾರಿಗೆ ಎಕ್ಸ್‌ಪ್ರೆಸ್ ಹೈವೆ ಪರಿಶೀಲನೆ ಮಾಡಿದ್ದಾರೆ.

ರಸ್ತೆ ನ್ಯೂನತೆ ಪರಿಶೀಲನೆ ಮಾಡುವಂತೆ ಒಂದು ತಿಂಗಳ ಗಡುವು ನೀಡಿದ್ದ ಅಲೋಕ್ ಕುಮಾರ್, ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕುವಂತೆ ಸೂಚಿಸಿದ್ದರು.

ಇಂದು ಕುಂಬಳಗೂಡು ಫ್ಲೈಓವರ್ ನಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆ ವರೆಗೂ ಪರಿಶೀಲನೆ ನಡೆಸಿದ್ದಾರೆ. ಐಜಿ ರವಿಕಾಂತೇಗೌಡ, ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಸಾಥ್ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next