Advertisement

ಪಿಎಸ್ ಐ ನೇಮಕಾತಿ ಹಗರಣದ ಆರೋಪ : ಇಬ್ಬರು ಅಧಿಕಾರಿಗಳ ಅಮಾನತು

12:14 AM Jul 05, 2022 | Team Udayavani |

ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣದ ಆರೋಪದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ಮತ್ತು ಲಂಚ ಪಡೆದ ಆರೊಪದ ಹಿನ್ನೆಲೆಯಲ್ಲಿ ಬಂಧಿತನಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ ಅವರನ್ನು ಸೇವೆಯಿಂದ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Advertisement

ಇಬ್ಬರೂ ಅಧಿಕಾರಿಗಳ ವಿಚಾರಣೆಯನ್ನು ಬಾಕಿ ಉಳಿಸಿಕೊಂಡು ಮುಂದಿನ ಆದೇಶದವರೆಗೂ ಅಮಾನತಿನಲ್ಲಿಡಲಾಗಿದೆ.

ಅಮೃತ್ ಪೌಲ್ ಅವರು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಸಮಯದಲ್ಲಿ ಪಿಎಸ್ಐ ಅಕ್ರಮ ನಡೆದಿತ್ತು. ಅಕ್ರಮ ಹಗರಣದಲ್ಲಿ ಅಮೃತ್ ಪೌಲ್ ಹೆಸರು ಕೂಡಾ ಕೇಳಿಬಂದಿತ್ತು. ಈ ಬಗ್ಗೆ ಅವರು ಸಿಐಡಿ ತನಿಖೆಗೂ ಹಾಜರಾಗಿದ್ದರು. ಇಂದು ನಾಲ್ಕನೇ ಬಾರಿಗೆ ಅವರು ತನಿಖೆಗೆ ಹಾರಜರಾದ ಸಮಯದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next