Advertisement

ಎಡಿಜಿಪಿ ಚರಣ್‌ ರೆಡ್ಡಿ ನಿಧನ

10:59 PM Mar 13, 2020 | Lakshmi GovindaRaj |

ಬೆಂಗಳೂರು: ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಕೆ.ಎಸ್‌.ಆರ್‌ ಚರಣ್‌ ರೆಡ್ಡಿ (54) ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಹಾವೀರ್‌ ಜೈನ್‌ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

Advertisement

ಚಿಕಿತ್ಸೆ ಫ‌ಲಿಸದೆ ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಗಾಯತ್ರಿ ರೆಡ್ಡಿ, ಪುತ್ರಿ ಲಾಸ್ಯ ರೆಡ್ಡಿ, ಪುತ್ರ ಪನಿಲ್‌ ರೆಡ್ಡಿಯನ್ನು ಅಗಲಿದ್ದಾರೆ. ಚರಣ್‌ ರೆಡ್ಡಿಯವರ ಅಂತಿಮ ಸಂಸ್ಕಾರ ಅವರ ಹುಟ್ಟೂರಾದ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಸಮೀಪದ ಗೊಲ್ಲಪಲ್ಲಿಯಲ್ಲಿ ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

1993ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದ ಚರಣ್‌ ರೆಡ್ಡಿ, ಸದ್ಯ ಸಿಐಡಿ ಎಡಿಜಿಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಕ್ರಮ ಗಣಿಗಾರಿಕೆ ಸಂಬಂಧ ಲೋಕಾಯುಕ್ತ ಎಸ್‌ಐಟಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಈ ವೇಳೆ, ರಾಜ್ಯದ ಪ್ರಮುಖ ರಾಜಕಾರಣಿಗಳನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next