Advertisement

ಸಿಎಂ ಪರಿಹಾರ ನಿಧಿಗೆ ಆದಿಚುಂಚನಗಿರಿ ಮಠದಿಂದ 50 ಲಕ್ಷ ರೂ. ದೇಣಿಗೆ

01:15 PM Apr 04, 2020 | keerthan |

ಬೆಂಗಳೂರು: ಕೋವಿಡ್-19 ವೈರಸ್ ವಿರುದ್ಧ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ 50 ಲಕ್ಷ ರೂ. ದೇಣಿಗೆ ನೀಡಲಾಗಿದೆ.

Advertisement

ಕೋವಿಡ್-19 ವೈರಸ್ ನಿಂದಾಗಿ ಉಂಟಾಗಿರುವ ತುರ್ತು ಪರಿಸ್ಥಿತಿಯ ನಿವಾರಣೆಗಾಗಿ ಸರ್ಕಾರದೊಡನೆ ಸ್ಪಂದಿಸುವ ಮಟ್ಟಿನಲ್ಲಿ ಮಠದಿಂದ 50 ಲಕ್ಷ ರೂ. ದೇಣಿಗೆ ನೀಡುವುದಾಗಿ ಆದಿಚುಂಚನಗಿಇರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ ನಿರ್ಮಲಾನಂದನಾಥ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಇದುವರೆಗೆ 128 ಕೋವಿಡ್-19 ಸೋಂಕು ಪತ್ತೆಯಾಗಿದ್ದು 11 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ನಾಲ್ವರು ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next