Advertisement

ಆನ ಆದ ಅದಿತಿ : ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌

08:29 PM Oct 25, 2020 | Suhan S |

ನಟಿ ಅದಿತಿ ಪ್ರಭುದೇವ ನಾಯಕಿಯಾಗಿ ಭಾನುವಾರ, ಅಕ್ಟೋಬರ್‌ 25, 2020 ಅಭಿನಯಿಸುತ್ತಿರುವ ಹೊಸಚಿತ್ರದ ಟೈಟಲ್‌ ಅನೌನ್ಸ್‌ ಆಗಿದೆ. ಮನೋಜ್‌ ಪಿ. ನಡಲುಮನೆ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ “ಆನ’ ಎಂದು ಹೆಸರಿಡಲಾಗಿದೆ.

Advertisement

ದಸರಾ ಹಬ್ಬದ ಸಂದರ್ಭದಲ್ಲಿ ಚಿತ್ರದ ಫ‌ಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಅದಿತಿ ಸೂಪರ್‌ ವುಮೆನ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಯುಕೆ ಪ್ರೋಡಕ್ಷನ್ಸ್‌’ ಲಾಂಛನದಲ್ಲಿ ಶ್ರೀಮತಿ ಪೂಜಾ ವಸಂತಕುಮಾರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಈ ಹಿಂದೆ ಕೆಲ ಕಿರುಚಿತ್ರ ಮತ್ತು ಟೆಲಿ ಫಿಲಂಗಳನ್ನು ನಿರ್ದೇಶನ ಮಾಡಿದಅನುಭವ ಹೊಂದಿರುವ ನಿರ್ದೇಶಕ ಮನೋಜ್‌ ಪಿ. ನಡಲುಮನೆ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗುತ್ತಿದ್ದಾರೆ. ತಮ್ಮ ಚೊಚ್ಚಲ ಚಿತ್ರದ ಬಗ್ಗೆ ಮಾತನಾಡುವ ಮನೋಜ್‌, “ಲಾಕ್‌ ಡೌನ್‌ ಸಮಯದಲ್ಲಿ ಹೊಳೆದ ಕಥೆ ಇದು. ಸದ್ಯ ಇಡೀ ಭಾರತದಲ್ಲಿ ಲೇಡಿ ಸೂಪರ್‌ ಹೀರೋ ಪರಿಕಲ್ಪನೆಯಲ್ಲಿ ಯಾವುದೇ ಸಿನಿಮಾ ಬಂದಿಲ್ಲ. ಅದನ್ನೇ ಗಮನದಲ್ಲಿಟ್ಟುಕೊಂಡು ಈ ಕಥೆ ಸಿದ್ಧಪಡಿಸಿಕೊಂಡು, ಸಿನಿಮಾ ಆರಂಭಿಸಿದ್ದೆ. ಇನ್ನೆರಡು ದಿನದ ಕ್ಲೈಮ್ಯಾಕ್ಸ್‌ ಶೂಟಿಂಗ್‌ ಬಾಕಿ ಇದೆ. ಚಿತ್ರದ ಕೊನೆಯ 20 ನಿಮಿಷಗಳು ನೋಡುಗರನ್ನು ಫ್ಯಾಂಟಸಿ ಲೋಕಕ್ಕೆ ಕರೆದೊಯ್ಯುವುದು ಪಕ್ಕಾ. ಹಾರರ್‌ ಶೈಲಿಯ ಅಂಶಗಳೂ ಈ ಸಿನಿಮಾದಲ್ಲಿವೆ.

ತಾಂತ್ರಿಕವಾಗಿ ಇಡೀ ಸಿನಿಮಾ ಶ್ರೀಮಂತವಾಗಿ ಮೂಡಿಬಂದಿದೆ. ಇನ್ನೊಂದು ವಿಶೇಷ ಏನೆಂದರೆ, ಈ ಸಿನಿಮಾ ಮುಂದಿನ ದಿನಗಳಲ್ಲಿ ಚಾಪ್ಟರ್‌ ಗಳಾಗಿಯೂ ಸಿದ್ಧವಾಗಲಿದೆ’ ಎಂದು ಮಾಹಿತಿ ನೀಡಿದರು. ಇನ್ನು ತಮ್ಮ ಪಾತ್ರದ ಬಗ್ಗೆ ಹೇಳಿಕೊಳ್ಳುವ ಅದಿತಿ, “ತುಂಬ ಇಷ್ಟಪಟ್ಟು ಮತ್ತು ತುಂಬ ಕಷ್ಟಪಟ್ಟು ಮಾಡಿದ ಸಿನಿಮಾ  ಇದು. ಇಂಥ ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟ. ಕಥೆ ಕೇಳಿ ಒಂದೇ ಸಲಕ್ಕೆ ನಟಿಸಲು ಒಪ್ಪಿಕೊಂಡೆ. ಚಿತ್ರದ ಬಹುಪಾಲು ಶೂಟಿಂಗ್‌ ರಾತ್ರಿ ಹೊತ್ತಿನಲ್ಲಿಯೇ ನಡೆದಿದೆ. ಇನ್ನು ಕೆಲ ಭಾಗದ ಚಿತ್ರೀಕರಣ ಬಾಕಿ ಇದೆ. ನನ್ನ ಸಿನಿಮಾ ಕರಿಯರ್‌ ನಲ್ಲಿ ಇಲ್ಲಿಯವರೆಗೂ ಮಾಡಿದ ಪಾತ್ರಗಳಿಗಿಂತ ವಿಭಿನ್ನ ಪಾತ್ರ ಈ ಸಿನಿಮಾದಲ್ಲಿದೆ. ಇಂತಹ ಅವಕಾಶ ನೀಡಿದ ಟೀಮ್‌ಗೆ ಧನ್ಯವಾದ’ ಎಂದರು.

ಇನ್ನು “ಆನ’ ಚಿತ್ರದಲ್ಲಿ ಅದಿತಿ ಜತೆಗೆ ನಾಲ್ಕು ಪ್ರಮುಖ ಪಾತ್ರಗಳು ಇರಲಿವೆ. ಸಮರ್ಥ, ವಿಕಾಸ್‌ ಉತ್ತಯ್ಯ, ವರುಣ್‌ ಅಮರಾವತಿ ಮತ್ತು ಕಾರ್ತಿಕ್‌ ನಾಗರಾಜ್‌ ಚಿತ್ರದ ಇತರೆ ಮುಖ್ಯ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ “ಚೂರಿಕಟ್ಟೆ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇರಣಾ ಚಿತ್ರದ ಮತ್ತೂಂದು ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಉದಯ್‌ ಲೀಲಾ ಛಾಯಾಗ್ರಹಣ, ವಿಜೇತ ಚಂದ್ರ ಸಂಕಲನವಿದೆ. ಚಿತ್ರದ ಹಾಡುಗಳಿಗೆ ರಿತ್ವಿಕ್‌ ಮುರಳೀಧರ್‌ ಸಂಗೀತ ಸಂಯೋಜನೆಯಿದೆ. ಸದ್ಯ ಟೈಟಲ್‌ ಅನಾವರಣ ಮಾಡಿ, ಮೋಷನ್‌ ಪೋಸ್ಟರ್‌ ರಿಲೀಸ್‌ ಮಾಡಿರುವ ಚಿತ್ರತಂಡ, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಿಗೆ ಚಾಲನೆ ನೀಡಿದೆ. ಚಿತ್ರಮಂದಿರಗಳು ಯಥಾಸ್ಥಿತಿಗೆ ಬರುತ್ತಿದ್ದಂತೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ ಚಿತ್ರತಂಡ.

Advertisement
Advertisement

Udayavani is now on Telegram. Click here to join our channel and stay updated with the latest news.

Next