Advertisement

Aditya L1: ನಾಲ್ಕನೇ ಹಂತದ ಕಕ್ಷೆ ಬದಲಾವಣೆ ಪ್ರಕ್ರಿಯೆಯಲ್ಲಿ ಯಶಸ್ವಿಯಾದ ಆದಿತ್ಯ ಎಲ್ 1

11:04 AM Sep 15, 2023 | Team Udayavani |

ನವದೆಹಲಿ: ಶುಕ್ರವಾರ ಮುಂಜಾನೆ ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ ಆಧಾರಿತ ಮಿಷನ್ ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯು ನಾಲ್ಕನೇ ಹಂತದ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದೆ ಎಂದು ಇಸ್ರೋ ತಿಳಿಸಿದೆ.

Advertisement

ಈ ಕುರಿತು ಟ್ವಿಟರ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡ ಇಸ್ರೊ ಗುರುವಾರ ತಡರಾತ್ರಿ 2 ಗಂಟೆಗೆ ಕಕ್ಷೆ ಬದಲಾವಣೆ ಕಾರ್ಯ ಯಶಸ್ವಿಯಾಗಿ ನೆರವೇರಿದೆ ಎಂದು ಹೇಳಿಕೊಂಡಿದೆ.

ಸೂರ್ಯನನ್ನು ಅಧ್ಯಯನ ಮಾಡಲು ಲಗ್ರೇಂಜ್ ಪಾಯಿಂಟ್ 1 (L1) ಗೆ ಹೊರಟಿರುವ ಬಾಹ್ಯಾಕಾಶ ನೌಕೆಯು ಮುಂದಿನ ಸೆಪ್ಟೆಂಬರ್ 19 ರಂದು ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ನಿರ್ಣಾಯಕ ಟ್ರಾನ್ಸ್-ಲಗ್ರಾಂಜಿಯನ್ ಪಾಯಿಂಟ್ 1 ಅಳವಡಿಕೆಗೆ (TL1I) ಒಳಗಾಗಲಿದೆ ಎಂದು ISRO ಹೇಳಿದೆ.

ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ-ಆಧಾರಿತ ಮಿಷನ್ ಆದಿತ್ಯ-ಎಲ್ 1, ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಹಾರಾಟ ನಡೆಸಿತು.

Advertisement

ಇದನ್ನೂ ಓದಿ: Ramanagar; ಟೈರ್ ಸ್ಪೋಟಗೊಂಡು ಬೃಹತ್ ಕಂಟೇನರ್ ಪಲ್ಟಿ; ಅಡಿಯಲ್ಲಿ ಸಿಲುಕಿ ಚಾಲಕನ ನರಳಾಟ

ಭೂಮಿಯ ಪರಿಭ್ರಮಣದಲ್ಲಿದ್ದ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಭೂಮಿಯಿಂದ ಲಗ್ರಾಂಜಿಯನ್ 1 ಬಿಂದುವಿಗೆ ರವಾನಿಸುವ ಮುಂದಿನ ಪ್ರಕ್ರಿಯೆ ಸೆಪ್ಟೆಂಬರ್ 19 ತಡರಾತ್ರಿ 2 ಗಂಟೆಗೆ ನಿಗದಿಯಾಗಿದೆ ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next