Advertisement

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

02:22 PM Jul 02, 2024 | Team Udayavani |

ಹಿರಿಯ ನಟ ಶಶಿಕುಮಾರ್‌ ಪುತ್ರ ಅಕ್ಷಿತ್‌ ಶಶಿಕುಮಾರ್‌ ಈಗ ಆದಿತ್ಯ ಶಶಿಕುಮಾರ್‌ ಅಂತ ಹೆಸರು ಬದಲಾಯಿಸಿಕೊಂಡಿದ್ದು, “ಕಾದಾಡಿ’ ಎನ್ನುವ ಚಿತ್ರದಲ್ಲಿ ನಟಿಸಿದ್ದಾರೆ.

Advertisement

ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಸಿದ್ಧಗೊಂಡಿರುವ ಸಿನಿಮಾವನ್ನು ಸತೀಶ್‌ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್‌ ಮುಖಾಂತರ ನಿರ್ಮಾಣ ಮಾಡಿದ್ದಾರೆ.

“ನನ್ನ ಹೆಸರನ್ನು ಆದಿತ್ಯ ಶಶಿಕುಮಾರ್‌ ಎಂದು ಬದಲಾಯಿಸಿಕೊಂಡಿದ್ದೇನೆ. ಶಾಲಾ ದಾಖಲಾತಿಗಳಲ್ಲಿ ಇದೇ ಹೆಸರಿನಲ್ಲಿ ನಮೂದು ಆಗಿದೆ. ಜ್ಯೋತಿಷ್ಯವನ್ನು ಹೆಚ್ಚು ನಂಬುವುದರಿಂದ ಈ ರೀತಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಚಿತ್ರಕ್ಕೆ ಇನ್ನು

ಪ್ರಚಾರ ಮಾಡಬೇಕಿತ್ತು. ನಿರ್ಮಾಪಕರು ರೀಲ್ಸ್ ಹೆಚ್ಚು ಮಾಡಿಸಿದ್ದಾರೆ. ಆದರೆ ಇದು ಟಿಕೆಟ್‌ ರೂಪಕ್ಕೆ ಬದಲಾಗೋಲ್ಲ. ಮೂರನೇ ಸಿನಿಮಾದ ಮೇಲೆ ತುಂಬಾ ಭರವಸೆ ಇಟ್ಟುಕೊಂಡಿದ್ದೇನೆ’ ಎನ್ನುವುದು ಆದಿತ್ಯ ಮಾತು.

ಏಕಕಾಲಕ್ಕೆ ಮೂರು ಭಾಷೆಗಳಲ್ಲಿ ಚಿತ್ರವನ್ನು ಸಿದ್ಧಪಡಿಸಲಾಗಿದೆ. ಕಿರುಚಿತ್ರ, ತೆಲುಗುದಲ್ಲಿಕಮರ್ಷಿಯಲ್‌ ಸಿನಿಮಾಗೆ ಆ್ಯಕ್ಷನ್‌ ಕಟ್‌ ಹೇಳಿದ್ದೇನೆ. ಕನ್ನಡದಲ್ಲಿ ಹೊಸ ಅನುಭವ. ಮೊದಲು ಇಲ್ಲಿ ಬಿಡುಗಡೆ ಮಾಡಿ, ಆಗಸ್ಟ್‌ನಲ್ಲಿ ತೆಲುಗು, ತಮಿಳಿನಲ್ಲಿ ರಿಲೀಸ್‌ ಮಾಡಲಾಗುವುದೆಂದು ನಿರ್ದೇಶಕರ ಸತೀಶ್‌ ಮಾಲೆಂಪಾಟಿ ಹೇಳಿಕೊಂಡರು.

Advertisement

ಜೀವನದ ಅಂತ್ಯದಲ್ಲಿ ಪ್ರತಿಯೊಬ್ಬರು ತ್ಯಾಗಮಯಿರಾಗುತ್ತಾರೆ. ನಾವೆಲ್ಲರೂ ಕಾದಾಡುತ್ತಾ ಒಂದು ದಿನ ಸಾಯುತ್ತೇವೆ. ಆದರೆ ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ಮಕ್ಕಳಿಗೆ ಏನಾದರೂ ಆಗಬೇಕು. ನಾವು ದಿನದಿಂದ ದಿನಕ್ಕೆ ಹೋರಾಟ ನಡೆಸುತ್ತಿದ್ದೇವೆ. ಇಂತಹ ಅಂಶಗಳನ್ನು ಥ್ರಿಲ್ಲರ್‌ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ.

ಲಾವಣ್ಯ ಸಾಹುಕಾರ, ಚಾಂದಿನಿ ತಮಿಳರಸನ್‌ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್ಮನೋಹರ್‌, ಶ್ರವಣ್‌ ರಾಘವೇಂದ್ರ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಗೋವಾ, ಚಿಕ್ಕಮಗಳೂರು, ಹೈದರಬಾದ್‌, ಚೆನ್ನೈ, ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಅಂದಹಾಗೆ ಸಿನಿಮಾ ಜುಲೈ ಮೊದಲ ವಾರ ತೆರೆಗೆ ಬರುವ ಸಾಧ್ಯತೆ ಇದೆ.

 

Advertisement

Udayavani is now on Telegram. Click here to join our channel and stay updated with the latest news.

Next