Advertisement

‘ಮುಂದುವರೆದ ಅಧ್ಯಾಯ’ಡೈಲಾಗ್‌ ಟೀಸರ್‌ ರಿಲೀಸ್: ಕ್ರೈಂ ಕಥಾಹಂದರದ ಚಿತ್ರದಲ್ಲಿ ಆದಿತ್ಯ

11:51 AM Feb 26, 2021 | Team Udayavani |

ಬಹುಸಮಯದ ಬಳಿಕ ನಟ ಆದಿತ್ಯ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ “ಮುಂದುವರೆದ ಅಧ್ಯಾಯ’ ಚಿತ್ರ ತೆರೆಗೆ ಬರಲು ರೆಡಿಯಾಗುತ್ತಿದೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಅಂತಿಮ ಹಂತದಲ್ಲಿರುವ “ಮುಂದುವರೆದ ಅಧ್ಯಾಯ’ ಚಿತ್ರದ ಡೈಲಾಗ್‌ ಟೀಸರ್‌ ಅನ್ನು ಇತ್ತೀಚೆಗೆ ಚಿತ್ರತಂಡ ಬಿಡುಗಡೆ ಮಾಡಿದೆ.

Advertisement

ಇನ್ನು “ಮುಂದುವರೆದ ಅಧ್ಯಾಯ’ ಡೈಲಾಗ್‌ ಟೀಸರ್‌ಗೆ ಸೋಶಿಯಲ್‌ ಮೀಡಿಯಾಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಟೀಸರ್‌ ರಿಲೀಸ್‌ ಆದ ಕೆಲವೆ ಗಂಟೆಗಳಲ್ಲಿ 5 ಲಕ್ಷಕ್ಕೂ ಹೆಚ್ಚು ವೀವ್ಸ್‌ ಪಡೆದುಕೊಂಡಿದೆ. “ನಾವೇ ಗೆಲ್ಲಿಸಿದ ರಾಜಕಾರಣಿಗಳನ್ನ ಬೈತೀವಿ…, ನಮ್ಮನ್ನ ಕಾಯೋ ಪೊಲೀಸ್‌ ರನ್ನ ಬೈತೀವಿ…’ ಅನ್ನೋ ಡೈಲಾಗ್‌ನಿಂದ ಪ್ರಾರಂಭವಾಗುವ ಈ ಟೀಸರ್‌ ಇಂದಿನ ಸಮಾಜಕ್ಕೆ ಕೈಗನ್ನಡಿ ಹಿಡಿಯುವಂತಿದೆ. ಬದಲಾವಣೆ ಬಯಸುವುದಲ್ಲ. ನಾವು ಬದಲಾಗೋದು. ಎಷ್ಟೋ ಕ್ರೈಂ ಕಥೆಗಳ ನಡುವೆ ಒಂದು ಕ್ರಾಂತಿಯ ಕಥೆ ಈ “ಮುಂದುವರೆದ ಅಧ್ಯಾಯ’ ಎಂದಿದೆ ಚಿತ್ರತಂಡ.

“ಕಣಜ ಎಂಟರ್‌ಪ್ರೈಸಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ಮುಂದುವರೆದ ಅಧ್ಯಾಯ’ ಚಿತ್ರಕ್ಕೆ ಬಾಲು ಚಂದ್ರಶೇಖರ್‌ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಅನೂಪ್‌ ಸೀಳಿನ್‌ ಹಿನ್ನಲೆ ಸಂಗೀತವಿದ್ದು, ಹಾಡುಗಳಿಗೆ ಜಾನಿ ನಿತಿನ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ದಿಲೀಪ್‌ ಛಾಯಾಗ್ರಹಣ, ಶ್ರೀಕಾಂತ್‌ ಸಂಕಲನವಿದೆ. “ಮುಂದುವರೆದ ಅಧ್ಯಾಯ’ ಚಿತ್ರದಲ್ಲಿ ಆದಿತ್ಯ ಜೊತೆಗೆ ಮುಖ್ಯಮಂತ್ರಿ ಚಂದ್ರು, ಜೈ ಜಗದೀಶ್‌, ಸಂದೀಪ್‌ ಕುಮಾರ್‌, ಅಜಯ್‌ ರಾಜ್‌, ಚಂದನ ಗೌಡ, ಆಶೀಕಾ ಸೋಮಶೇಖರ್‌, ವಿನಯ್‌ ಕೃಷ್ಣಸ್ವಾಮಿ, ವಿನೋದ್‌, ಶೋಭನ್‌ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಇತ್ತೀಚೆಗಷ್ಟೇ “ಮುಂದುವರೆದ ಅಧ್ಯಾಯ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ “ಯು/ಎ’ ಪ್ರಮಾಣಪತ್ರ ನೀಡಿದೆ. ಇದೇ ಖುಷಿಯಲ್ಲಿ ಸದ್ಯ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಮಾರ್ಚ್‌ ನಲ್ಲಿ “ಮುಂದುವರೆದ ಅಧ್ಯಾಯ’ ಚಿತ್ರವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next