Advertisement

BJP ವಿರುದ್ಧ ಸಭೆಯ ದಿನಾಂಕ ಮುಂದೂಡಿಕೆ

12:38 AM Jun 06, 2023 | Team Udayavani |

ಪಾಟ್ನಾ: ವಿಪಕ್ಷಗಳಿಗಾಗಿ ಹಮ್ಮಿಕೊಂಡಿರುವ ಸಭೆಯಲ್ಲಿ ಆಯಾ ಪಕ್ಷಗಳ ಮುಖ್ಯಸ್ಥರು ಮಾತ್ರ ಭಾಗವಹಿಸಬೇಕು. ಈ ಹಿಂದೆ ಜೂ.12ರಂದು ಸಭೆ ನಿಗದಿಪಡಿಸಲಾಗಿತ್ತು. ಆದರೆ ಅದೀಗ ಮುಂದೂಡಲಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ತಿಳಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಎಲ್ಲ ವಿಪಕ್ಷಗಳನ್ನು ಸಂಪ ರ್ಕಿಸಿ ಸಭೆಯ ಮುಂದಿನ ದಿನಾಂಕವನ್ನು ನಿರ್ಧ ರಿಸಲಾಗುವುದು. ಈ ಹಿಂದೆ ಜೂ.12ರಂದು ಸಭೆ ನಿಗದಿಪಡಿಸಲಾಗಿತ್ತು. ಆದರೆ ಈ ದಿನಾಂಕ ಕಾಂಗ್ರೆಸ್‌ ಮತ್ತು ಇನ್ನೊಂದು ಪಕ್ಷಕ್ಕೆ ಅನನುಕೂಲವಾಗಿತ್ತು. ಹಾಗಾಗಿ ಎಲ್ಲ ವಿಪಕ್ಷಗಳನ್ನು ಸಂಪರ್ಕಿಸಿ ಸೂಕ್ತ ದಿನಾಂಕವನ್ನು ನಿರ್ಧರಿಸುವಂತೆ ಕಾಂಗ್ರೆಸ್‌ಗೆ ತಿಳಿಸಲಾಗಿದೆ’ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next