Advertisement

BJP ವಿರುದ್ಧ ಜಾಹೀರಾತು: ಸಿಎಂ, ಡಿಸಿಎಂಗೆ ಸಂಕಷ್ಟ

12:03 AM Feb 24, 2024 | Team Udayavani |

ಬೆಂಗಳೂರು: ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಹಾಗೂ ಸುಳ್ಳು ಆರೋಪಗಳನ್ನು ಮುದ್ರಿಸಿ ಜಾಹೀರಾತು ನೀಡಿದ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್‌ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ನಾಲ್ವರು ಆರೋಪಿಗಳಿಗೆ ಸಮನ್ಸ್‌ ಜಾರಿಗೊಳಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.

Advertisement

ಚುನಾವಣೆ ವೇಳೆ ಬಿಜೆಪಿ ವಿರುದ್ಧ ಆರೋಪಿಗಳು 40 ಪರ್ಸೆಂಟ್‌ ಕಮಿಷನ್‌ ಸರಕಾರ ಮತ್ತು ಶಾಸಕನನ್ನು ಮಂತ್ರಿ ಮಾಡಲು ಹಾಗೂ ಸರಕಾರಿ ಅಧಿಕಾರಿಗಳ ವರ್ಗಾವಣೆಗೆ 50 ಲಕ್ಷದಿಂದ ಕೋಟ್ಯಂತರ ರೂ. ಲಂಚ ನೀಡಬೇಕೆಂದು ಆರೋಪಿಸಿ ಜಾಹೀರಾತು ನೀಡಿದ್ದರು.

ಹೀಗಾಗಿ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿದ್ದಾರೆಂದು ಕಾಂಗ್ರೆಸ್‌ ಹಾಗೂ ಆರೋಪಿಗಳ ವಿರುದ್ಧ ಬಿಜೆಪಿ ಖಾಸಗಿ ದೂರು ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್‌ ಆರೋಪಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಮಾ.28ರಂದು ಖುದ್ದು ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡುವಂತೆ ಆದೇಶಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next