Advertisement

ಕಾರ್ಮಿಕ ಇಲಾಖೆ ಕಲ್ಯಾಣ ಯೋಜನೆ ಸದ್ಬಳಕೆಗೆ ಸಲಹೆ

03:13 PM Aug 27, 2022 | Team Udayavani |

ಯಾದಗಿರಿ: ಕಾರ್ಮಿಕರ ಕಲ್ಯಾಣಕ್ಕಾಗಿ ಕಾರ್ಮಿಕ ಇಲಾಖೆ ವತಿಯಿಂದ ಮದುವೆ, ಹೆರಿಗೆ, ಶೈಕ್ಷಣಿಕ ಸಹಾಯಧನ ಹೀಗೆ ಹತ್ತು ಹಲವು ಯೋಜನೆ ಹಮ್ಮಿಕೊಂಡಿದ್ದು, ಅರ್ಹರೆಲ್ಲರೂ ನೋಂದಣಿ ಮಾಡಿಸಿಕೊಳ್ಳುವ ಮೂಲಕ ಇಲಾಖೆ ಸೇವೆಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಹೇಳಿದರು.

Advertisement

ನಗರದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕ ಮಹಿಳಾ ಫಲಾನುಭವಿಗಳಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಮಿಕ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಕಾರ್ಮಿಕ ಇಲಾಖೆಗಳ ಯೋಜನೆಯ ಬಾಂಡ್‌ ವಿತರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ ಮಾತನಾಡಿ, ಯಾದಗಿರಿ ಜಿಲ್ಲಾದ್ಯಂತ ಅರ್ಹ ಕಟ್ಟಡ ಕಾರ್ಮಿಕರ ನೋಂದಣಿ ಕಾರ್ಯ ಚಾಲ್ತಿಯಲ್ಲಿದ್ದು, ನೋಂದಾಯಿಸಿ ಉಪಯೋಗ ಪಡೆದುಕೋಳ್ಳಬೇಕು ಎಂದು ತಿಳಿಸಿದರು.

ಜೊತೆಗೆ ಎಲ್ಲಾ ವರ್ಗದ ಕಾರ್ಮಿಕರು ಇ-ಶ್ರಮ್‌ ಕಾರ್ಡ್‌ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಗಂಗಾಧರ, ಕಾರ್ಮಿಕ ನಿರೀಕ್ಷಕರು ಹಾಗೂ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next