Advertisement

ಸಿಇಟಿ ಪರೀಕ್ಷೆ ಸುವ್ಯವಸ್ಥಿತ ನಡೆಸಲು ಸಲಹೆ

02:32 PM Jul 29, 2020 | Suhan S |

ಬೀದರ: ಜಿಲ್ಲೆಯಲ್ಲಿ 2020ನೇ ಸಾಲೀನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಸುವ್ಯವಸ್ಥೆಯಿಂದ ನಡೆಸಲು ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿ ಕಾರಿ ರುದ್ರೇಶ ಗಾಳಿ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿಇಟಿ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ತಾಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಬೇಕು. ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಬೇಕು. ಮಾಸ್ಕ್ ಧರಿಸಲು ತಿಳಿಸಬೇಕು. ಪರೀಕ್ಷೆ ಸಂಪೂರ್ಣವಾಗಿ ಸಿಸಿ ಟಿವಿ ಕಣ್ಗಾವಲಿನಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು. ಮೊಬೈಲ್‌, ಪೇಜರ್‌, ಬ್ಲೂಟೂತ್‌, ವೈರ್‌ಲೆಸ್‌ ಸೆಟ್‌, ಸ್ಲೆ$çಡ್‌ರೂಲ್‌ ಕ್ಯಾಲ್ಕುಲೇಟರ್‌, ವಾಚ್‌ ಕ್ಯಾಲ್ಕುಲೇಟರ್‌, ಲಾಗ್‌ ಪುಸ್ತಕ, ಮಾರ್ಕರ್‌, ಪಠ್ಯಪುಸ್ತಕ, ನಕಲು ಚೀಟಿಗಳನ್ನು ವಿದ್ಯಾರ್ಥಿಗಳು ತರದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ ಜೊತೆಗೆ ಯಾವುದಾದರು ಒಂದು ಮೂಲ ಅಥವಾ ಝರಾಕ್ಸ್‌ ಗುರುತಿನ ಚೀಟಿ ತರುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು. ಡಿಡಿಪಿಯು ರಮೇಶ ಬೆಜಗಂ ಮಾತನಾಡಿ, ನಿಯಮಾವಳಿಯಂತೆ ಪರೀಕ್ಷೆ ನಡೆಸಲು ಒತ್ತು ಕೊಡಲಾಗುವುದು. ಜಿಲ್ಲೆಯಲ್ಲಿ ಒಟ್ಟು 28 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 8,328 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವರು. ಈಗಾಗಲೇ ತಾಲೂಕುಗಳಲ್ಲಿ ತಹಶೀಲ್ದಾರ್‌, ಬಿಇಒ ಹಾಗೂ ಇಲಾಖೆಯ ಪ್ರಾಚಾರ್ಯರನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ. ಸರಿಯಾದ ಸಮಯಕ್ಕೆ ಪ್ರಶ್ನೆ ಪತ್ರಿಕೆಗಳು ಪರೀಕ್ಷಾ ಕೇಂದ್ರವನ್ನು ತಲುಪುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವೀಕ್ಷಕರು ಮತ್ತು ಮಾರ್ಗಾಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next