Advertisement

VARANASI: ಜ್ಞಾನವಾಪಿ ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆ ಮುಂದೂಡಲು ಸಲಹೆ

12:03 AM May 20, 2023 | Team Udayavani |

ಹೊಸದಿಲ್ಲಿ: ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂಬ ಅಲಹಾಬಾದ್‌ ಹೈಕೋರ್ಟ್‌ನ ಆದೇಶ ಜಾರಿ ಮಾಡುವುದನ್ನು ಮುಂದೂಡಿಕೆ ಮಾಡಲು ಸುಪ್ರೀಂ ಕೋರ್ಟ್‌ ಸೂಚಿಸಿದೆ. ಮೇ 12ರಂದು ಹೈಕೋರ್ಟ್‌ ನೀಡಿದ್ದ ಆದೇಶ ವಿರುದ್ಧ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್‌, ನ್ಯಾ| ಪಿ.ಎಸ್‌. ನರಸಿಂಹ, ನ್ಯಾ| ಕೆ.ವಿ.ವಿಶ್ವನಾಥನ್‌ ಅವರನ್ನೊಳಗೊಂಡ ನ್ಯಾಯಪೀಠ ಉತ್ತರ ಪ್ರದೇಶ ಸರಕಾರ, ಹಿಂದೂ ಸಮುದಾಯದ ಪರ ವಕೀಲರಿಗೆ ನೋಟಿಸ್‌ ಜಾರಿ ಮಾಡಿತು. ಹೈಕೋರ್ಟ್‌ ನೀಡಿದ ಆದೇಶವನ್ನು ಸಮಗ್ರವಾಗಿ ಪರಿಶೀಲಿಸಬೇಕಿದೆ. ಹೀಗಾಗಿ ಸದ್ಯಕ್ಕೆ ಅದರ ಅನುಷ್ಠಾನ ಬೇಡ ಎಂದಿತು ನ್ಯಾಯಪೀಠ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next