Advertisement

ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯ ಯಾಕೂಬ್ ಕೊಲೆ

01:45 PM Jul 11, 2020 | keerthan |

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ತಾರಕಕ್ಕೇರಿ ಪಂಚಾಯತ್ ಸದಸ್ಯನ ಕೊಲೆಯಲ್ಲಿ ಅಂತ್ಯವಾದ ಘಟನೆನಗರದ ಹೊರವಲಯದ ಅಡ್ಯಾರು ಪದವು ಎಂಬಲ್ಲಿ ಶುಕ್ರವಾರ ನಡೆದಿದೆ.

Advertisement

ಅಡ್ಯಾರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಯಾಕೂಬ್ ಎಂಬಾತ ಕೊಲೆಯಾದ ವ್ಯಕ್ತಿ.

ಅಡ್ಯಾರ್ ಪದವು ಎಂಬಲ್ಲಿ ಶುಕ್ರವಾರ ಸಂಜೆ ಘಟನೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಯಾಕೂಬ್ ನನ್ನು ನೆಲಕ್ಕೆ ದೂಡಿ ಹಾಕಿ ಎದೆಗೆ ಒದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯಾಕೂಬ್ ನನ್ನು ಆಟೋ ರಿಕ್ಷಾದಲ್ಲಿ ತಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ವೈಯಕ್ತಿಕ ದ್ವೇಷ ಅಥವಾ ರಾಜಕೀಯ ಪ್ರೇರಿತ ದ್ವೇಷ ಕಾರಣದಿಂದ ನಡೆಸಿಬರಬಹುದು ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next