Advertisement

ನಿನ್ನೆ ಮದುವೆ.. ಇಂದು ಮುಂಜಾನೆ ಮದುಮಗಳು ಹೃದಯಾಘಾತದಿಂದ ನಿಧನ!

11:07 AM Mar 01, 2021 | Team Udayavani |

ಮಂಗಳೂರು: ಆ ಮನೆಯಲ್ಲಿ ರವಿವಾರ ಸಂಭ್ರಮ ತುಂಬಿ ತುಳುಕಾಡಿತ್ತು. ಮನೆಯ ಮಗಳ ಮದುವೆಯ ಸಂಭ್ರಮದ ಘಳಿಗೆಯಲ್ಲಿ ಮನೆಯವರು ಕುಣಿಕಾಡಿದ್ದರು. ಆದರೆ ಇಂದು ಮುಂಜಾನೆ ಅದೇ ಮನೆಯಲ್ಲಿ ದುಖಃ ಮಡುಗಟ್ಟಿದೆ. ಕಾರಣ ನಿನ್ನೆಯಷ್ಟೇ ವಿವಾಹವಾಗಿದ್ದ ಮಗಳು ಇಂದು (ಸೋಮವಾರ) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ!

Advertisement

ಮಂಗಳೂರಿನ ಅಡ್ಯಾರ್ ಕಣ್ಣೂರು ಸಮೀಪದ ಬೀರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಎಚ್‌ಕೆ ಅಬ್ದುಲ್ ಕರೀಂ ಹಾಜಿ ಎಂಬವರ ಪುತ್ರಿ ಲೈಲಾ ಆಫಿಯಾ (23) ಸೋಮವಾರ ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದವರು.

ಲೈಲಾ ಆಫಿಯಾ ಅವರ ವಿವಾಹವು ಕಣ್ಣೂರಿನ ಮದುಮಗ ಮುಬಾರಕ್ ರೊಂದಿಗೆ ರವಿವಾರ ನಡೆದಿತ್ತು. ಅಡ್ಯಾರ್ ಕಣ್ಣೂರು ಜುಮಾ ಮಸ್ಜಿದ್‌ನಲ್ಲಿ ನಿಖಾಹ್ ನಡೆದು, ಅಡ್ಯಾರ್ ಗಾರ್ಡನ್‌ನಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು.

ಇದನ್ನೂ ಓದಿ:ಇಂದಿನಿಂದ ದ್ವಿತೀಯ ಹಂತದ ಲಸಿಕೆ: ಕೋವಿಡ್ ಲಸಿಕೆ ಪಡೆದ ಪ್ರಧಾನಿ ನರೇಂದ್ರ ಮೋದಿ

ಔತಣಕೂಟದ ಬಳಿಕ ಮದುಮಗ ಮುಬಾರಕ್ ಅತ್ತೆಯ ಮನೆಗೆ ಆಗಮಿಸಿದ್ದರು. ಮನೆಯಲ್ಲಿ ಸಂಭ್ರಮ ಕಳೆಕಟ್ಟಿತ್ತು. ಆದರೆ ಇಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಲೈಲಾ ಆಫಿಯಾ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಕೊನೆಯುಸಿರೆಳೆದಿದ್ದಾರೆ.

Advertisement

ನಿನ್ನೆ ಸಂಭ್ರಮದಲ್ಲಿದ್ದ ಮನೆಯಲ್ಲಿಂದು ನೀರವ ಮೌನ ತುಂಬಿದೆ.

ಇದನ್ನೂ ಓದಿ: ನಾನು ಕೇವಲ ನಟಿಯಲ್ಲ, ಉದ್ಯಮಿಯೂ ಆಗಿದ್ದೇನೆ:  ಪೂಜಾ ಗಾಂಧಿ

Advertisement

Udayavani is now on Telegram. Click here to join our channel and stay updated with the latest news.

Next