Advertisement

ಏರೋ ಇಂಡಿಯಾ: ಬಿಎಸ್‌ವೈ ಜವಾಬ್ದಾರಿ ತೆಗೆದುಕೊಳ್ಳಲಿ 

06:00 AM Aug 15, 2018 | Team Udayavani |

ಬೆಂಗಳೂರು: ಏರೋ ಇಂಡಿಯಾ ಪ್ರದರ್ಶನ ರಾಜ್ಯದಿಂದ ಸ್ಥಳಾಂತರಗೊಳ್ಳುವುದನ್ನು ತಡೆಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಜವಾಬ್ದಾರಿ ವಹಿಸಿಕೊಳ್ಳ ಬೇಕೆಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಏರ್‌ ಶೋ ಬೆಂಗಳೂರಿನಲ್ಲಿ ನಡೆಯಬೇಕೆನ್ನುವುದು ನಮ್ಮ ಸರ್ಕಾರದ ಆಗ್ರಹ. ಬೆಂಗಳೂರಿನಲ್ಲಿ ಏರ್‌ ಶೋ ನಡೆಯದಿದ್ದರೆ, ರಾಜ್ಯದ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ ಎಂದು
ಹೇಳಿದರು. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಬೀದರ್‌ನಲ್ಲಿ ಸ್ಪರ್ಧಿಸುತ್ತಾರೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಈ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿಲ್ಲ. ಆದರೆ, ರಾಷ್ಟ್ರೀಯ ನಾಯಕರು ಸ್ಪರ್ಧೆ ಮಾಡುವುದಾದರೆ ನಾವು ಬೇಡ ಎನ್ನುವುದಿಲ್ಲ. ಅವರು ಎಲ್ಲಿಯೇ ಸ್ಪರ್ಧೆ ಮಾಡಿದರೂ
ನಮ್ಮ ಬೆಂಬಲ ಇದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next