Advertisement

ಧೋವಲ್ ಭೇಟಿ ನಂತರ ಜಮ್ಮು-ಕಾಶ್ಮೀರಕ್ಕೆ 10 ಸಾವಿರ ಅರೆಸೇನಾಪಡೆ ರವಾನೆ

09:16 AM Jul 28, 2019 | Team Udayavani |

ಶ್ರೀನಗರ್/ನವದೆಹಲಿ:ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಮ್ಮು-ಕಾಶ್ಮೀರಕ್ಕೆ 10ಸಾವಿರ ಅರೆಸೇನಾಪಡೆ ಯೋಧರನ್ನು ಕಳುಹಿಸಲು ಆದೇಶ ನೀಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

Advertisement

ತುರ್ತಾಗಿ ಜಮ್ಮು-ಕಾಶ್ಮೀರಕ್ಕೆ ಸಿಎಆರ್ ಪಿಎಫ್ ನ 100ಕಂಪನಿ ಟ್ರೂಪ್ ಅನ್ನು(10ಸಾವಿರ) ಕಳುಹಿಸಿಕೊಡಬೇಕೆಂದು ಜುಲೈ 25ರಂದು ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿತ್ತು.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾಶ್ಮೀರ ಕಣಿವೆಗೆ ಎರಡು ದಿನಗಳ ಕಾಲ ಭೇಟಿ ನೀಡಿ ವಾಪಸ್ ಆದ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮೂಲಗಳ ಪ್ರಕಾರ, ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಜಮ್ಮು-ಕಾಶ್ಮೀರದ ಕಾನೂನು-ಸುವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿರುವ ದೋವಲ್ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ನೀಡಿರುವುದಾಗಿ ತಿಳಿಸಿದೆ.

ಉತ್ತರ ಕಾಶ್ಮೀರದಲ್ಲಿ ಅರೆಸೇನಾಪಡೆಯ ಸಂಖ್ಯೆ ಕಡಿಮೆ ಇದ್ದು, ಈಗಾಗಲೇ ಹೆಚ್ಚುವರಿ ಅರೆಸೇನಾಪಡೆಯನ್ನು ಏರ್ ಲಿಫ್ಟ್ ಮಾಡಲಾಗಿದೆ ಎಂದು ದಿಲ್ಭಾಗ್ ಸಿಂಗ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next