Advertisement

ಗೌರಿ ಆಯ್ತು, ನಿಮ್ಮ ಐವರಿಗೂ ಉಳಿಗಾಲವಿಲ್ಲ; Facebook ನಲ್ಲಿ ಬೆದರಿಕೆ

11:50 AM Sep 08, 2017 | Team Udayavani |

ನವದೆಹಲಿ: ಪತ್ರಕರ್ತೆ, ವಿಚಾರವಾದಿ ಚಿಂತಕಿ ಗೌರಿ ಲಂಕೇಶ್ ಹತ್ಯೆಯ ಬೆನ್ನಲ್ಲೇ ಖ್ಯಾತ ಪತ್ರಕರ್ತೆ ಸಾಗರಿಕಾ ಘೋಷ್ ಸೇರಿದಂತೆ ಐವರೂ ಹತ್ಯೆಗೆ ಗುರಿಯಾಗಲಿದ್ದಾರೆ ಎಂದು ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಘಟನೆ ಬಗ್ಗೆ ಗುರುವಾರ ದೆಹಲಿ ಸೈಬರ್ ಕ್ರೈಂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Advertisement

ದೇಶದ್ರೋಹಿಗಳಾಗಿರುವ  ಖ್ಯಾತ ಲೇಖಕಿ, ಕಾದಂಬರಿಗಾರ್ತಿ ಶೋಭಾ ಡೇ, ಅರುಂಧತಿ ರಾಯ್, ಸಾಗರಿಕಾ ಘೋಷ್, ಕವಿತಾ ಕೃಷ್ಣನ್ ಹಾಗೂ ಶೀಲಾ ರಶೀದ್ ಅವರನ್ನು ಹತ್ಯೆಗೈಯುವುದಾಗಿ ಬೆದರಿಕೆಯೊಡ್ಡಿ ವ್ಯಕ್ತಿಯೊಬ್ಬ ಫೇಸ್ ಬುಕ್ ಫೋಸ್ಟ್ ಹಾಕಿದ್ದು, ಈ ಬಗ್ಗೆ ಸಾಗರಿಕಾ ಘೋಷ್ ಅವರು ದೆಹಲಿ ಪೊಲೀಸರಿಗೆ ದೂರು ನೀಡಿದ್ದರು.

ಪತ್ರಕರ್ತೆ ಸಾಗರಿಕಾ ಘೋಷ್ ಅವರ ದೂರಿನ ಆಧಾರದ ಮೇಲೆ ಐಟಿ ಕಾಯ್ದೆಯಡಿ ನಾವು ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯೊಬ್ಬ ವಿಕ್ರಮ್ ಆದಿತ್ಯ ರಾಣಾ ಮತ್ತು ವಿಕ್ರಮ್ ಜಿಬ್ ರಾಣಾ ಎಂಬ ಹೆಸರಿನಲ್ಲಿ ಫೇಸ್ ಬುಕ್ ನಲ್ಲಿ ಬೆದರಿಕೆ ಹಾಕಿ ಪೋಸ್ಟ್ ಮಾಡಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next