Advertisement

ತನಿಖೆ ಬಳಿಕ ಸಿಡಿ ನಿರ್ಮಾಪಕ, ನಟ, ನಿರ್ದೇಶಕ ಬಯಲು: ರವಿ

08:16 PM Mar 16, 2021 | Team Udayavani |

ಚಿಕ್ಕಮಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ನಂತರ ಇದರ ಹಿಂದೆ ಯಾರ್ಯಾರು ಇದ್ದಾರೆ, ಪ್ರೊಡ್ನೂಸರ್‌, ಡೈರೆಕ್ಟರ್‌, ಆ್ಯಕ್ಟರ್‌ ಯಾರೆಂಬುದು ತಿಳಿಯುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ ಹೆಸರು ಏಕೆ ಥಳಕು ಹಾಕಿಕೊಂಡಿದೆಯೋ ಗೊತ್ತಿಲ್ಲ, ವಿಚಾರಣೆ ನಂತರ ಎಲ್ಲವೂ ತಿಳಿಯಲಿದೆ. ಸಿಡಿ ಪ್ರಕರಣ ರಾಜ್ಯ ರಾಜಕಾರಣಕ್ಕೆ ಗೌರವ ತರುವಂತಹ ವಿಷಯವಲ್ಲ, ಹಿಂದೆ ಮೌಲ್ಯಾಧಾರಿತ ರಾಜಕೀಯ ಚರ್ಚೆ ನಡೆಯುತ್ತಿತ್ತು.

ಈಗ ಸಿಡಿ ಆಧಾರಿತ ರಾಜಕೀಯ ಚರ್ಚೆ ನಡೆಯುತ್ತಿದೆ. ಮೌಲ್ಯಧಾರಿತವೋ ಅಥವಾ ಸಿಡಿ ಆಧಾರಿತ ರಾಜಕಾರಣ ಬೇಕೋ ಎಂದು ಯೋಚಿಸಬೇಕು. ಸಾರ್ವಜನಿಕ ಜೀವನದಲ್ಲಿರುವರು ಪರಿಶುದ್ಧವಾಗಿ ರಾಜಕಾರಣದ ಬಗ್ಗೆ ಆಲೋಚನೆ ಮಾಡಬೇಕು. ಜನಲಜ್ಜೆ ಮತ್ತು ಮನಲಜ್ಜೆ ಇರಬೇಕು. ನಮಗೆ ನಾವೇ ಪರಿಮಿತಿ ಹಾಕಿಕೊಳ್ಳಬೇಕು.

ತಮಿಳುನಾಡು ಚುನಾವಣೆಯಲ್ಲಿ 234 ಸ್ಥಾನಗಳಲ್ಲಿ 20 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡಲಿದೆ. ಉಳಿದ ಕ್ಷೇತ್ರಗಳಿಗೆ ಎಐಡಿಎಂಕೆ ನೇತೃತ್ವದಲ್ಲಿ ಎನ್‌ಡಿಎ ಸ್ಪರ್ಧೆ ನಡೆಸಲಿದೆ. ಎಐಡಿಎಂಕೆ ನೇತೃತ್ವದಲ್ಲಿ ಎನ್‌ಡಿಎ ಅಧಿ ಕಾರಕ್ಕೆ ಬರುವುದು ಖಚಿತ. ಬಿಜೆಪಿ ಸ್ಪರ್ಧಿಸಿರುವ 20 ಸ್ಥಾನಗಳಲ್ಲಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಮಾಜಿ ಐಪಿಎಸ್‌ ಅ ಧಿಕಾರಿ ಅಣ್ಣಾಮಲೈ ಅವರಿಗೆ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ. ಅವರು ಗೆಲುವು ಸಾಧಿ ಸಿ ತಮಿಳುನಾಡಿಗೆ ಒಳ್ಳೆಯ ನಾಯಕತ್ವ ನೀಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next