Advertisement

ಪುದುಚೇರಿಗೆ ಕಾಲಿಟ್ಟ “ಹಿಜಾಬ್‌’ವಿವಾದ

09:28 PM Feb 07, 2022 | Team Udayavani |

ನವದೆಹಲಿ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್‌ ವಿವಾದ ನೆರೆಯ ಪುದುಚೇರಿಗೂ ಕಾಲಿಟ್ಟಿದೆ.

Advertisement

ಅಲ್ಲಿನ ಶಾಲೆಯೊಂದರಲ್ಲಿ ಓದುತ್ತಿರುವ ಕರ್ನಾಟಕ ಮೂಲದ ಬಾಲಕಿಯೊಬ್ಬಳಿಗೆ ಆಕೆ ನಿತ್ಯ ಧರಿಸಿ ಬರುತ್ತಿದ್ದ ಹಿಜಾಬ್‌ ತೆಗೆದಿರಿಸಿ ತರಗತಿಗೆ ಬರಬೇಕೆಂದು ಶಾಲೆಯ ಆಡಳಿತ ಮಂಡಳಿ ಸೂಚಿಸಿದೆ.

ಇದು ವಿವಾದಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ, ಪುದುಚೇರಿ ಶಿಕ್ಷಣ ಇಲಾಖೆಯ ನಿರ್ದೇಶಕ ಪಿ.ಟಿ. ರುದ್ರಗೌಡ ಹಾಗೂ ಸ್ಥಳೀಯ ರಾಜಕಾರಣಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ನಡುವೆ ಸೋಮವಾರ ಸಭೆ ನಡೆದಿದ್ದು, ಎಲ್ಲಾ ಶಾಲೆಗಳಲ್ಲೂ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸಿ ತರಗತಿಗಳಿಗೆ ಬರಲು ಅವಕಾಶ ಕಲ್ಪಿಸಬೇಕೆಂದು ಸುತ್ತೋಲೆ ಹೊರಡಿಸುವುದಾಗಿ ರುದ್ರಗೌಡ ಆಶ್ವಾಸನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next