Advertisement

ಪಂಜಾಬ್‌ ಚುನಾವಣೆಯನ್ನು ಗೆದ್ದರೂ ಕೇಜ್ರಿ ದಿಲ್ಲಿಯಲ್ಲೇ: ಆಪ್‌ ವರಸೆ

11:13 AM Jan 11, 2017 | Team Udayavani |

ಹೊಸದಿಲ್ಲಿ : ಪಂಜಾಬ್‌ ವಿಧಾನಸಭಾ ಚುನಾವಣೆಯನ್ನು ಆಮ್‌ ಆದ್ಮಿ ಪಕ್ಷ ಗೆದ್ದರೂ ಅರವಿಂದ ಕೇಜ್ರಿವಾಲ್‌ ದಿಲ್ಲಿ ಮುಖ್ಯಮಂತ್ರಿಯಾಗಿಯೇ ಮುಂದುವರಿಯುತ್ತಾರೆ ಎಂದು ಪಕ್ಷವು ಹೇಳಿದೆ.

Advertisement

ಆಮ್‌ ಆದ್ಮಿ ಪಕ್ಷದ ಪಂಜಾಬ್‌ ನಡೆಯನ್ನು ವಿಪಕ್ಷಗಳು ತೀವ್ರವಾಗಿ ಟೀಕಿಸಿದ ಬಳಿಕ ಪಂಜಾಬ್‌ ಚುನಾವಣೆಯನ್ನು ಆಪ್‌ ಗೆದ್ದಲ್ಲಿ ಅರವಿಂದ ಕೇಜ್ರಿವಾಲ್‌ ಅವರು ಪಂಜಾಬ್‌ ಮುಖ್ಯಮಂತ್ರಿಯಾಗುವರೆಂಬ ಸುಳಿವನ್ನು ನಿನ್ನೆಯಷ್ಟೇ ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ನೀಡಿದ್ದರು. ಇದಕ್ಕೆ ಪ್ರತಿಪಕ್ಷಗಳು ಆಮ್‌ ಆದ್ಮಿ ಪಕ್ಷವನ್ನು ತೀವ್ರವಾಗಿ ಟೀಕಿಸಿದ್ದವು. 

“ಅರವಿಂದ ಕೇಜ್ರಿವಾಲ್‌ ಅವರು ಪಂಜಾಬ್‌ ಚುನಾವಣೆಯಲ್ಲಿ ಆಪ್‌ನ ಮುಖವಾಗಿರುತ್ತಾರೆ ಎಂದ ಮಾತ್ರಕ್ಕೆ ಅವರೇ ಪಂಜಾಬ್‌ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅರ್ಥವಲ್ಲ. ಆಮ್‌ ಆದ್ಮಿ ಪಕ್ಷ ಪಂಜಾಬ್‌ ಚುನಾವಣೆಯನ್ನು ಗೆದ್ದರೂ ಕೇಜ್ರಿವಾಲ್‌ ಅವರು ದಿಲ್ಲಿ ಮುಖ್ಯಮಂತ್ರಿಯಾಗಿಯೇ ಮುಂದುವರಿಯಲಿದ್ದಾರೆ’ ಎಂದು ಪಕ್ಷದ ನಾಯಕ ಆತಿಶಿ ಮರಿಯಾನಾ ಹೇಳಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next