Advertisement

ರಾಜೀನಾಮೆ ನೀಡಿದಾಕ್ಷಣ ರಾಜ್ಯ ಸರ್ಕಾರ ಬೀಳಲ್ಲ

12:45 AM Mar 05, 2019 | |

ಹೊಸದುರ್ಗ: ಕಾಂಗ್ರೆಸ್‌ನ ಉಮೇಶ್‌ ಜಾಧವ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಯಾರೋ ಒಬ್ಬ ಶಾಸಕ ರಾಜೀನಾಮೆ ನೀಡಿದಾಕ್ಷಣ ಸರ್ಕಾರ ಬಿದ್ದು ಹೋಗುವುದಿಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಸಚಿವ ವೆಂಕಟರಮಣಪ್ಪ ತಿಳಿಸಿದರು.

Advertisement

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ರಮೇಶ್‌ ಜಾರಕಿಹೊಳಿ ಸೇರಿದಂತೆ ಅತೃಪ್ತ ಶಾಸಕ ರ್ಯಾರೂ ರಾಜೀನಾಮೆ ನೀಡುವ ಮಾತೇ ಇಲ್ಲ ಎಂದರು. ಮಾಜಿ ಸಿಎಂ ಸಿದ್ದ ರಾಮಯ್ಯ ಜಾರಿಗೊಳಿಸಿದ್ದ ಯೋಜನೆಗಳನ್ನು ಸಮ್ಮಿಶ್ರ ಸರ್ಕಾರ ಮುಂದುವರೆಸಿ ಕೊಂಡು ಹೋಗುತ್ತಿದೆ. ಹಾಗಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಸುಭದ್ರವಾಗಿದ್ದು,ಐದು ವರ್ಷ ಅವಧಿ ಪೂರೈಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪಗೆ ಅರಳು ಮರಳು: ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ.ಹಾಗಾಗಿ ಅರಳು ಮರಳು ಜಾಸ್ತಿಯಾಗಿ ಎಲ್ಲರನ್ನೂ ಅನುಮಾನದಿಂದ ನೋಡು ತ್ತಾರೆ. ಕ್ಷೇತ್ರದ ಅಭಿವೃದಿಟಛಿ ಸಲುವಾಗಿ ನಮ್ಮೊಂದಿಗೆ ಕಾಣಿಸಿಕೊಳ್ಳುವ ಶಾಸಕ ಗೂಳಿಹಟ್ಟಿ ಶೇಖರ್‌ ಮೇಲೂ ಅವರಿಗೆ ನಂಬಿಕೆ ಇಲ್ಲ ಎಂದು ಕುಟುಕಿದ ಸಚಿವ ವೆಂಕಟರಮಣಪ್ಪ , ಯಡಿಯೂರಪ್ಪಮುಂದೆಂದೂ ಮುಖ್ಯಮಂತ್ರಿಯಾಗಲು
ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next