Advertisement

Mangalore: ಪೊಲೀಸರ ಕೊಲೆಗೆ ಯತ್ನಿಸಿ ರೌಡಿ ಆಕಾಶಭವನ ಶರಣ್‌ ಪರಾರಿ

01:35 AM Jan 07, 2024 | Team Udayavani |

ಮಂಗಳೂರು: ನಟೋರಿಯಸ್‌ ರೌಡಿ ಆಕಾಶಭವನ ಶರಣ್‌ ಮಂಗಳೂರು ನಗರ ಅಪರಾಧ ಪತ್ತೆದಳ (ಸಿಸಿಬಿ) ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿ ಪರಾರಿಯಾದ ಘಟನೆ ನಡೆದಿದೆ.

Advertisement

ಜ. 2ರಂದು ರಾತ್ರಿ ಆಕಾಶ ಭವನ ಶರಣ್‌ ನಗರದ ಮೇರಿಹಿಲ್‌ನಲ್ಲಿ ಕಾರಿನಲ್ಲಿದ್ದಾಗ ಸಿಸಿಬಿ ಪೊಲೀಸರು ಆತನ ಕಾರನ್ನು ಅಡ್ಡಗಟ್ಟಲು ಮುಂದಾದರು. ಆಗ ಪೊಲೀಸರ ವಾಹನಕ್ಕೆ ಕಾರು ಢಿಕ್ಕಿಪಡಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಪೊಲೀಸರು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಅಕ್ಟೋಬರ್‌ನಲ್ಲಿ ಸುಳ್ಯದ ಕೆವಿಜಿ ಪಾಲಿಟೆಕ್ನಿಕ್‌ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ರೇಣುಕಾಪ್ರಸಾದ್‌ ಸೇರಿ 5 ಮಂದಿಗೆ ಹೈಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿತ್ತು. ಸುಪಾರಿ ಪಡೆದು ಕೊಲೆ ಕೃತ್ಯ ನಡೆಸಿದ್ದ ಆಕಾಶ ಭವನ ಶರಣ್‌ ಕೂಡ ದೋಷಿಯಾಗಿದ್ದ. ಆದರೆ ನ್ಯಾಯಾಲಯಕ್ಕೆ ಗೈರು ಹಾಜರಾಗಿ ತಲೆಮರೆಸಿಕೊಂಡಿದ್ದ. ಹಾಗಾಗಿ ಈತನಿಗೆ ಶಿಕ್ಷೆ ಪ್ರಕಟವಾಗಿರಲಿಲ್ಲ. ಈತನ ಪತ್ತೆಗೆ ಪೊಲೀಸರು ಯತ್ನಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಇದೀಗ ಪೊಲೀಸ್‌ ವಾಹನಕ್ಕೆ ಕಾರು ಢಿಕ್ಕಿಪಡಿಸಿ ಪರಾರಿಯಾಗಿದ್ದಾನೆ.

21 ಪ್ರಕರಣಗಳ ಆರೋಪಿ ಈತ
ಆಕಾಶಭವನ ಶರಣ್‌ ಮೇಲೆ ಮಂಗಳೂರು ಮತ್ತು ಉಡುಪಿಯಲ್ಲಿ ಕೊಲೆ, ಕೊಲೆಯತ್ನ, ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ, ಹಫ್ತಾ ವಸೂಲಿ ಸೇರಿದಂತೆ 21 ಪ್ರಕರಣಗಳು ದಾಖಲಾಗಿವೆ. 2020ರ ಅ. 20ರಂದು ಸುರೇಂದ್ರ ಬಂಟ್ವಾಳ್‌ನನ್ನು ಜೈಲಿನಲ್ಲಿದ್ದುಕೊಂಡೇ ತನ್ನ ಸಹಚರರಿಂದ ಹತ್ಯೆಗೈದಿದ್ದ. 2022ರ ಕೊನೆಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. 2023ರ ಜ. 14ರಂದು ಸುರತ್ಕಲ್‌ ಬಳಿ ಸ್ಕೂಟರ್‌ ಅಡ್ಡಗಟ್ಟಿ ಸುಲಿಗೆಗೆ ಯತ್ನಿಸಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ. ನಾಲ್ಕು ತಿಂಗಳಲ್ಲಿ ಮತ್ತೆ ಜೈಲಿನಿಂದ ಬಿಡುಗಡೆಯಾಗಿ ತಲೆಮರೆಸಿಕೊಂಡಿದ್ದ. ಶಸ್ತ್ರಾಸ್ತ್ರ ಕಾಯಿದೆಯಡಿ ಕೂಡ ಈತನ ಮೇಲೆ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next