Advertisement

ಮಧ್ಯಾಹ್ನದ ಬಿಸಿಯೂಟಕ್ಕೆ ಚಾಲನೆ

09:35 AM Oct 23, 2021 | Team Udayavani |

ಚಿತ್ತಾಪುರ: ಎರಡು ವರ್ಷಗಳಿಂದ ಸ್ಥಗಿತವಾಗಿದ್ದ ಮಧ್ಯಾಹ್ನದ ಬಿಸಿಯೂಟವನ್ನು ಸರ್ಕಾರದ ಆದೇಶದಂತೆ ಪುನಃ ಆರಂಭಿಸಲಾಗಿದ್ದು, ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಾಗುತ್ತಿದೆ ಎಂದು ಸರ್ಕಾರಿ ಪ್ರೌಢ ಶಾಲೆ ಕರದಾಳ ಎಸ್‌ಡಿಎಂಸಿ ಅಧ್ಯಕ್ಷ ನಾಗಮೂರ್ತಿ ಗುತ್ತೇದಾರ ಹೇಳಿದರು.

Advertisement

ತಾಲೂಕಿನ ಕರದಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುಮಾರು ಎರಡು ವರ್ಷಗಳಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದರು. ಕೋವಿಡ್‌ -19 ಶಿಕ್ಷಣದ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ಎಲ್ಲ ಕಡೆ ಕೊರೊನಾ ಹಾವಳಿ ಕಡಿಮೆಯಾಗಿದ್ದು, ವಿದ್ಯಾರ್ಥಿಗಳು ಧೈರ್ಯವಾಗಿ ಶಾಲೆಗೆ ಬರಬಹುದು ಎಂದರು.

ಅ.25ರಂದು 1ರಿಂದ 5ನೇ ತರಗತಿಗಳು ಆರಂಭಗೊಳ್ಳುತ್ತಿದ್ದು, ಪಾಲಕರು ತಪ್ಪದೇ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು ಎಂದು ಮನವಿ ಮಾಡಿದರು. ಶಾಲೆಯ ಮುಖ್ಯದ್ವಾರವನ್ನು ತಳಿರು-ತೋರಣಗಳಿಂದ ಶೃಂಗರಿಸಿದ ಶಿಕ್ಷಕರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಗಣ್ಯರು ಮಕ್ಕಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಶಾಲೆಯ ಮುಖ್ಯ ಶಿಕ್ಷಕ ಪಂಡಿತ ನೆಲೋಗಿ ಹಾಗೂ ಶಿಕ್ಷಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next