Advertisement

ಮತ್ತೆ ‘ಕೈ’ಹಿಡಿಯಲಿದ್ದಾರೆ ರಾಜ್ಯದ ಜನ: ಪರಮೇಶ್ವರ್‌ 

11:40 AM Aug 28, 2017 | Team Udayavani |

ಹುಬ್ಬಳ್ಳಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನತೆ ಮತ್ತೆ ನಮ್ಮ ಕೈ ಹಿಡಿಯುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅಥವಾ ಪ್ರಧಾನಿ ನರೇಂದ್ರ ಮೋದಿ ಬಂದರೆ ನಾವು ಆತಂಕಗೊಳ್ಳಬೇಕಿಲ್ಲ. ಜನರು ನಮ್ಮ ಪರವಾಗಿದ್ದಾರೆ. ಸಿ ಫೋರ್‌ ನಡೆಸಿದ ಸಮೀಕ್ಷೆ ವರದಿ ಪೈಯ್ಡ ನ್ಯೂಸ್‌ ಆಗಿದ್ದರೆ ಬಿಜೆಪಿಯವರು ತಾವು ಮಾಡಿಸಿದ ಸಮೀಕ್ಷೆಯ ವರದಿ ಬಹಿರಂಗಪಡಿಸಲಿ. ಬಿಜೆಪಿ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಸ್ಥಾನಗಳು ಸಿಗದಿರುವುದರಿಂದ ಸಮೀಕ್ಷೆ ವರದಿ ಬಹಿರಂಗಗೊಳಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next