Advertisement

ಬಟ್ಟೆಯಂಗಡಿಯಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಹೋದ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವು

11:50 AM Nov 14, 2020 | keerthan |

ಮಧುರೈ: ಇಲ್ಲಿನ ಬಟ್ಟೆಯಂಗಡಿಯೊಂದರಲ್ಲಿ ನಡೆದ ಅಗ್ನಿ ದುರಂತದಲ್ಲಿ ಇಬ್ಬರು ಅಗ್ನಿ ಶಾಮಕ ಸಿಬ್ಬಂದಿ ಸಾವಿಗೀಡಾಗಿದ್ದಾರೆ.

Advertisement

ಮಧುರೈನ ನವಬತ್ಕಾನಾ ಪ್ರದೇಶದಲ್ಲಿರುವ ಬಟ್ಟೆಯಂಗಡಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿ, ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು.

ಇದನ್ನೂ ಓದಿ:ರಾಜಸ್ಥಾನದ ಲೋಂಗೇವಾಲಾ ಗಡಿಯಲ್ಲಿ ಯೋಧರ ಜತೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ಆದರೆ ಈ ಸಮಯದಲ್ಲಿ ಏಕಾಏಕಿ ಕಟ್ಟಡ ಕುಸಿತ ಸಂಭವಿಸಿದೆ. ಹೀಗಾಗಿ ಅದರೊಳಗೆ ಸಿಲುಕಿದ್ದ ಇಬ್ಬರು ಅಗ್ನಿ ಶಾಮಕ ಸಿಬ್ಬಂದಿ ಮೃತಪಟ್ಟಿದ್ದಾರೆ. ಸತತ ಕಾರ್ಯಾಚರಣೆಯ ಮೂಲಕ ಬಟ್ಟೆಯಂಗಡಿಯ ಬೆಂಕಿ ನಂದಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next