Advertisement

ಅಗ್ನಿಪಥ ಯೋಜನೆ ಪ್ರಶ್ನಿಸಿ ಅರ್ಜಿ: ಮುಂದಿನ ವಾರ ಸುಪ್ರೀಂಕೋರ್ಟ್‌ ವಿಚಾರಣೆ

08:28 PM Jul 04, 2022 | Team Udayavani |

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಗ್ನಿಪಥ ಯೋಜನೆ ವಿರುದ್ಧ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಸುಪ್ರೀಂಕೋರ್ಟ್‌ ಅಂಗೀಕರಿಸಿದೆ.

Advertisement

ಮುಂದಿನ ವಾರ ಅದನ್ನು ಕೈಗೆತ್ತಿಕೊಳ್ಳುವುದಾಗಿ ನ್ಯಾ.ಇಂದಿರಾ ಬ್ಯಾನರ್ಜಿ ಮತ್ತು ನ್ಯಾ.ಜೆ.ಕೆ.ಮಾಹೇಶ್ವರಿ ಅವರನ್ನೊಳಗೊಂಡ ರಜಾ ಕಾಲದ ನ್ಯಾಯಪೀಠ ಅದನ್ನು ಕೈಗೆತ್ತಿಕೊಂಡಿದೆ.

ಈಗಾಗಲೇ ಭಾರತೀಯ ವಾಯುಪಡೆಯಲ್ಲಿ ತರಬೇತಿ ಪಡೆದವರು ನೇಮಕ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಇದೊಂದು ತುರ್ತು ವಿಚಾರ. ಕೂಡಲೇ ಅದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು.

ಹಲವು ಮಂದಿಯ ಉದ್ಯೋಗ ಜೀವನಕ್ಕೆ ಕುತ್ತಾಗಿ ಪರಿಣಮಿಸಲಿದೆ ಎಂದು ವಕೀಲ ಎಂ.ಎಲ್‌.ಶರ್ಮಾ ಅರ್ಜಿಯಲ್ಲಿ ವಾದಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next