Advertisement

Agra; ತಾಜ್‌ಮಹಲ್‌ಗೆ ಗಂಗಾಜಲ ಪ್ರೋಕ್ಷಣೆ ಮಾಡಿದ ಇಬ್ಬರ ಬಂಧನ

12:17 AM Aug 04, 2024 | Team Udayavani |

ಆಗ್ರಾ: ತಾಜ್‌ ಮಹಲ್‌ನ ಒಳಗಿರುವ ಸಮಾಧಿಯ ಮೇಲೆ ಗಂಗಾಜಲ ಸಿಂಪಡಿಸಿದ ಘಟನೆ ಶನಿವಾರ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪ್ಲಾಸ್ಟಿಕ್‌ ಬಾಟಲ್‌ಗ‌ಳಲ್ಲಿ ಗಂಗಾಜಲವನ್ನು ತುಂಬಿಕೊಂಡು ಬಂದಿದ್ದ ಇಬ್ಬರು ವ್ಯಕ್ತಿಗಳು ತಾಜ್‌ಮಹಲ್‌ನ ನೆಲಮಾಳಿಗೆಗೆ ಸಂಪರ್ಕ ಕಲ್ಪಿಸುವ ಮೆಟ್ಟಿಲುಗಳ ಮೇಲೆ ಗಂಗಾಜಲ ಸಿಂಪಡಿಸಿ ವೀಡಿಯೋ ಮಾಡಿಕೊಂಡಿದ್ದಾರೆ.

Advertisement

ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇಬ್ಬರು ವ್ಯಕ್ತಿಗಳು ಬಲಪಂಥೀಯರಾಗಿದ್ದು, ತಾಜ್‌ಮಹಲ್‌ ಶಿವ ದೇವಾಲಯವಾಗಿದ್ದು, ಈ ಹಿನ್ನೆಲೆ ಯಲ್ಲಿ ಗಂಗಾ ಜಲ ಪ್ರೋಕ್ಷಣೆ ಮಾಡಿದ್ದೇವೆ ಎಂದು ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ. ತಾಜ್‌ಮಹಲ್‌ನ ರಕ್ಷಣೆಯ ಹೊಣೆ ಹೊತ್ತಿರುವ ಸಿಐಎಸ್‌ಎಫ್ನ ಸಿಬಂದಿ ಈ ಇಬ್ಬರನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next