Advertisement

Agra; ಐಎಎಫ್ ನ ಅಗ್ನಿವೀರ ಯೋಧ ಆತ್ಮಹತ್ಯೆ

12:55 AM Jul 06, 2024 | Team Udayavani |

ಮೇರಟ್ : ಆಗ್ರಾದಲ್ಲಿ ಇರುವ ಭಾರತೀಯ ವಾಯುಪಡೆ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 22 ವರ್ಷದ ಅಗ್ನಿವೀರ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಶ್ರೀಕಾಂತ್‌ ಚೌಧರಿ ಎಂದು ಗುರುತಿಸಲಾಗಿದೆ. 2022ರಲ್ಲಿ ಐಎಎಫ್ಗೆ ಆಯ್ಕೆಯಾಗಿದ್ದರು. ಇದೇ ವೇಳೆ, ಶ್ರೀಕಾಂತ್‌ ಸಾವಿಗೆ ಕಾರಣವೇನೆಂದು ತಿಳಿಯಲು ತನಿಖಾ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಐಎಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಬಲ್ಲಿಯಾ ಜಿಲ್ಲೆಯಲ್ಲಿ ಅವರ ಅಂತ್ಯಕ್ರಿಯೆ ಸಕಲ ಸೇನಾಗೌರವಗಳೊಂದಿಗೆ ಗುರುವಾರ ನಡೆಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next